ರೈತರ ಪ್ರತಿಭಟನೆಯನ್ನು ಕೊನೆಗೊಳಿಸುವ ಸಲುವಾಗಿ ಸರ್ಕಾರ ಮತ್ತು ರೈತ ಸಂಘಟನೆಗಳು ಇಲ್ಲಿಯವರೆಗೆ 11 ಸುತ್ತಿನ ಮಾತುಕತೆ ನಡೆಸಿವೆ, ಕೊನೆಯದು ಜನವರಿ 22 ರಂದು ನಡೆಯಿತು. ಆದರೆ ಈವರೆಗೂ ಮಾತುಕತೆ ಫಲಪ್ರದವಾಗಿಲ್ಲ. ಜನವರಿ 26ರಂದು ನಡೆದ ರೈತರ ಪ್ರತಿಭಟನೆ ವೇಳೆ ವ್ಯಾಪಕ ಹಿಂಸಾಚಾರದ ನಂತರ ಮಾತುಕತೆ ಪುನರಾರಂಭಗೊಂಡಿಲ್ಲ.