ಎಐಜಿ ಆಸ್ಪತ್ರೆಗಳ ಅಧ್ಯಕ್ಷ ಡಾ.ನಾಗೇಶ್ವರ ರೆಡ್ಡಿ, ತಮ್ಮ ಅಧ್ಯಯನದ ಫಲಿತಾಂಶಗಳನ್ನು ‘ವಿಸ್ಮಯಕಾರಿ’ ಎಂದು ಬಣ್ಣಿಸಿದ್ದಾರೆ. ‘ವಿಶೇಷವಾಗಿಗರ್ಭಿಣಿಯರು, ಮಧುಮೇಹ, ಅಧಿಕ ರಕ್ತದೊತ್ತಡ, ಸ್ಥೂಲಕಾಯ ಮತ್ತು ದೀರ್ಘಕಾಲದ ಅನಾರೋಗ್ಯ ಅನುಭವಿಸುತ್ತಿರುವ ವಯೋವೃದ್ಧರಂತಹ ಹೆಚ್ಚಿನ ಅಪಾಯದ ವ್ಯಕ್ತಿಗಳಲ್ಲಿ ಕೋವಿಡ್ -19 ಚಿಕಿತ್ಸೆಗಾಗಿ ಸಾರ್ವಜನಿಕ ಆರೋಗ್ಯ ನೀತಿಯನ್ನು ಮರುರೂಪಿಸುವ ಸಾಮರ್ಥ್ಯ ಈ ಅಧ್ಯಯನದ ಫಲಿತಾಂಶದಲ್ಲಿದೆ’ ಎಂದು ಅವರು ಹೇಳಿದ್ದಾರೆ.