<p><strong>ನವದೆಹಲಿ:</strong> ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವ ಪರಿಶಿಷ್ಟರಿಗೂ, ಮೀಸಲಾತಿ ಸೌಲಭ್ಯವನ್ನು ನೀಡಬೇಕು ಎಂಬ ಬೇಡಿಕೆ ಕುರಿತಂತೆ ಮೂರು ವಾರಗಳಲ್ಲಿ ನಿಲುವು ಸ್ಪಷ್ಟಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ಈ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕರ ಹಿತಾಸಕ್ತಿ ಅರ್ಜಿಯಲ್ಲಿ, ಮತಾಂತರಗೊಂಡಿರುವ ದಲಿತರಿಗೂ ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮ ಪಾಲಿಸುತ್ತಿರುವ ದಲಿತರಿಗೂ ನೀಡಬೇಕು ಎಂದು ಕೋರಲಾಗಿದೆ. ಇನ್ನೊಂದು ಅರ್ಜಿಯಲ್ಲಿ ಮೂಲತಃ ಪರಿಶಿಷ್ಟರಾಗಿದ್ದ ಕ್ರೈಸ್ತರಿಗೂ ಮೀಸಲಾತಿ ಸೌಲಭ್ಯಗಳನ್ನು ವಿಸ್ತರಿಸಬೇಕು ಎಂದು ಮನವಿ ಮಾಡಲಾಗಿದೆ.</p>.<p>ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಈ ಕುರಿತಂತೆ ಸರ್ಕಾರದ ನಿಲುವನ್ನು ತಿಳಿಸಲಾಗುವುದು ಎಂದು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರಿದ್ದ ಪೀಠಕ್ಕೆ ತಿಳಿಸಿದರು.</p>.<p>ನ್ಯಾಯಮೂರ್ತಿಗಳಾದ ಎ.ಎಸ್.ಓಕಾ, ವಿಕ್ರಂ ನಾಥ್ ಅವರೂ ಪೀಠದಲ್ಲಿದ್ದಾರೆ.</p>.<p>ಅರ್ಜಿದಾರರ ಪರ ವಕೀಲರು ವಾರದಲ್ಲಿ ಪ್ರತಿಕ್ರಿಯೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಮೂರು ಪುಟಗಳಿಗೆ ಮೀರದಂತೆ ಮುಂದಿನ ವಿಚಾರಣೆ ದಿನದ ಮೂರು ದಿನ ಮೊದಲು ಪ್ರತಿಕ್ರಿಯೆ ದಾಖಲಿಸಬೇಕು ಎಂದು ನ್ಯಾಯಮೂರ್ತಿ<br />ತಿಳಿಸಿದರು.</p>.<p>ಮುಂದಿನ ವಿಚಾರಣೆಯನ್ನು ಅಕ್ಟೋಬರ್ 11ಕ್ಕೆ ಮುಂದೂಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದ ಕಾನೂನು ತೊಡಕುಗಳನ್ನು ಬಗೆಹರಿಸಬೇಕು ಎಂದು ಪೀಠವು ಅಭಿಪ್ರಾಯಪಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವ ಪರಿಶಿಷ್ಟರಿಗೂ, ಮೀಸಲಾತಿ ಸೌಲಭ್ಯವನ್ನು ನೀಡಬೇಕು ಎಂಬ ಬೇಡಿಕೆ ಕುರಿತಂತೆ ಮೂರು ವಾರಗಳಲ್ಲಿ ನಿಲುವು ಸ್ಪಷ್ಟಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ಈ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕರ ಹಿತಾಸಕ್ತಿ ಅರ್ಜಿಯಲ್ಲಿ, ಮತಾಂತರಗೊಂಡಿರುವ ದಲಿತರಿಗೂ ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮ ಪಾಲಿಸುತ್ತಿರುವ ದಲಿತರಿಗೂ ನೀಡಬೇಕು ಎಂದು ಕೋರಲಾಗಿದೆ. ಇನ್ನೊಂದು ಅರ್ಜಿಯಲ್ಲಿ ಮೂಲತಃ ಪರಿಶಿಷ್ಟರಾಗಿದ್ದ ಕ್ರೈಸ್ತರಿಗೂ ಮೀಸಲಾತಿ ಸೌಲಭ್ಯಗಳನ್ನು ವಿಸ್ತರಿಸಬೇಕು ಎಂದು ಮನವಿ ಮಾಡಲಾಗಿದೆ.</p>.<p>ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಈ ಕುರಿತಂತೆ ಸರ್ಕಾರದ ನಿಲುವನ್ನು ತಿಳಿಸಲಾಗುವುದು ಎಂದು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರಿದ್ದ ಪೀಠಕ್ಕೆ ತಿಳಿಸಿದರು.</p>.<p>ನ್ಯಾಯಮೂರ್ತಿಗಳಾದ ಎ.ಎಸ್.ಓಕಾ, ವಿಕ್ರಂ ನಾಥ್ ಅವರೂ ಪೀಠದಲ್ಲಿದ್ದಾರೆ.</p>.<p>ಅರ್ಜಿದಾರರ ಪರ ವಕೀಲರು ವಾರದಲ್ಲಿ ಪ್ರತಿಕ್ರಿಯೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಮೂರು ಪುಟಗಳಿಗೆ ಮೀರದಂತೆ ಮುಂದಿನ ವಿಚಾರಣೆ ದಿನದ ಮೂರು ದಿನ ಮೊದಲು ಪ್ರತಿಕ್ರಿಯೆ ದಾಖಲಿಸಬೇಕು ಎಂದು ನ್ಯಾಯಮೂರ್ತಿ<br />ತಿಳಿಸಿದರು.</p>.<p>ಮುಂದಿನ ವಿಚಾರಣೆಯನ್ನು ಅಕ್ಟೋಬರ್ 11ಕ್ಕೆ ಮುಂದೂಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದ ಕಾನೂನು ತೊಡಕುಗಳನ್ನು ಬಗೆಹರಿಸಬೇಕು ಎಂದು ಪೀಠವು ಅಭಿಪ್ರಾಯಪಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>