<p>ನವದೆಹಲಿ: ‘ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ಬಿಡುಗಡೆಗೊಳಿಸುವ ಮೀಸಲು ಪಟ್ಟಿಯು ಕಾಯುವಿಕೆಯ (ವೇಟಿಂಗ್) ಪಟ್ಟಿಯಲ್ಲ, ಇದೊಂದು ಸಹಜ ಪ್ರಕ್ರಿಯೆಯಷ್ಟೇ’ ಎಂದು ಕೇಂದ್ರ ಸಿಬ್ಬಂದಿ ಖಾತೆ ಸಚಿವ ಜಿತೇಂದ್ರ ಸಿಂಗ್ ಗುರುವಾರ ತಿಳಿಸಿದ್ದಾರೆ.</p>.<p>‘ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶದ ಬಳಿಕ ಯುಪಿಎಸ್ಸಿ ಮೀಸಲು ಪಟ್ಟಿಯನ್ನು ಬಿಡುಗಡೆಗೊಳಿಸುತ್ತದೆ. ಈ ವ್ಯವಸ್ಥೆಯು 2003ರಿಂದ ಆರಂಭವಾಯಿತು. ಈ ವ್ಯವಸ್ಥೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಈ ವ್ಯವಸ್ಥೆಯನ್ನು ಎತ್ತಿ ಹಿಡಿದು 2010ರಲ್ಲಿ ಆದೇಶ ನೀಡಿತು’ ಎಂದು ರಾಜ್ಯಸಭೆಯಲ್ಲಿ ತಿಳಿಸಿದರು.</p>.<p>‘ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ವಿವಿಧ ಇಲಾಖೆಗಳಿಗೆ ನಿಯೋಜಿಸಲು ಶಿಫಾರಸು ಮಾಡಲಾಗುತ್ತದೆ. ಒಟ್ಟು ಖಾಲಿ ಹುದ್ದೆಗಳನ್ನು ಸಹ ಈ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ. ಮೊದಲ ಹಂತದಲ್ಲಿ ಮೆರಿಟ್ ಅನ್ವಯ ವಿವಿಧ ವರ್ಗಗಳ ಅಭ್ಯರ್ಥಿಗಳನ್ನು ನಿಯೋಜಿಸಲಾಗುತ್ತದೆ’ ಎಂದು ವಿವರಿಸಿದ್ದಾರೆ.</p>.<p>‘ಯುಪಿಎಸ್ಸಿ ರಹಸ್ಯವಾಗಿ ಮೀಸಲು ಪಟ್ಟಿಯನ್ನು ಸಹ ಸಿದ್ಧಪಡಿಸುತ್ತದೆ. ಈ ಪಟ್ಟಿಯಲ್ಲಿ ಸಾಮಾನ್ಯ ಮತ್ತು ಮೀಸಲಾತಿ ಪಡೆದ ಅಭ್ಯರ್ಥಿಗಳ ವಿವರ ಇರುತ್ತದೆ. ಮೊದಲ ಹಂತದಲ್ಲಿ ವಿವಿಧ ಸೇವೆಗಳಿಗೆ ಅಭ್ಯರ್ಥಿಗಳನ್ನು ನಿಯೋಜಿಸಿದ ನಂತರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಕೋರಿಕೆಯಂತೆ ಮತ್ತೆ ಮೀಸಲು ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಹೆಸರುಗಳನ್ನು ನೇಮಕಕ್ಕೆ ಶಿಫಾರಸು ಮಾಡಲಾಗುತ್ತದೆ’ ಎಂದು ವಿವರಿಸಿದ್ದಾರೆ.</p>.<p>ಈ ಬಗ್ಗೆ 2019ರ ಪರೀಕ್ಷೆ ಫಲಿತಾಂಶದ ಉದಾರಣೆ ಸಮೇತ ವಿವರಗಳನ್ನು ಪ್ರಸ್ತಾಪಿಸಿ ಉತ್ತರ ನೀಡಿರುವ ಸಚಿವರು, ‘ಯುಪಿಎಸ್ಸಿ ಕಳೆದ ವರ್ಷ ಆಗಸ್ಟ್ 4ರಂದು ಫಲಿತಾಂಶ ಪ್ರಕಟಿಸಿತ್ತು. ಇದರಲ್ಲಿ 829 ಅಭ್ಯರ್ಥಿಗಳು ಯಶಸ್ವಿಯಾಗಿದ್ದರು. ನಂತರ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಕೋರಿಕೆ ಮೇರೆಗೆ ಯುಪಿಎಸ್ಸಿ ಈ ವರ್ಷ ಜನವರಿ 4ರಂದು ಮತ್ತೆ 89 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಈ ಅಭ್ಯರ್ಥಿಗಳು ಮೀಸಲು ಪಟ್ಟಿಯಲ್ಲಿದ್ದರು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ‘ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ಬಿಡುಗಡೆಗೊಳಿಸುವ ಮೀಸಲು ಪಟ್ಟಿಯು ಕಾಯುವಿಕೆಯ (ವೇಟಿಂಗ್) ಪಟ್ಟಿಯಲ್ಲ, ಇದೊಂದು ಸಹಜ ಪ್ರಕ್ರಿಯೆಯಷ್ಟೇ’ ಎಂದು ಕೇಂದ್ರ ಸಿಬ್ಬಂದಿ ಖಾತೆ ಸಚಿವ ಜಿತೇಂದ್ರ ಸಿಂಗ್ ಗುರುವಾರ ತಿಳಿಸಿದ್ದಾರೆ.</p>.<p>‘ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶದ ಬಳಿಕ ಯುಪಿಎಸ್ಸಿ ಮೀಸಲು ಪಟ್ಟಿಯನ್ನು ಬಿಡುಗಡೆಗೊಳಿಸುತ್ತದೆ. ಈ ವ್ಯವಸ್ಥೆಯು 2003ರಿಂದ ಆರಂಭವಾಯಿತು. ಈ ವ್ಯವಸ್ಥೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಈ ವ್ಯವಸ್ಥೆಯನ್ನು ಎತ್ತಿ ಹಿಡಿದು 2010ರಲ್ಲಿ ಆದೇಶ ನೀಡಿತು’ ಎಂದು ರಾಜ್ಯಸಭೆಯಲ್ಲಿ ತಿಳಿಸಿದರು.</p>.<p>‘ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ವಿವಿಧ ಇಲಾಖೆಗಳಿಗೆ ನಿಯೋಜಿಸಲು ಶಿಫಾರಸು ಮಾಡಲಾಗುತ್ತದೆ. ಒಟ್ಟು ಖಾಲಿ ಹುದ್ದೆಗಳನ್ನು ಸಹ ಈ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ. ಮೊದಲ ಹಂತದಲ್ಲಿ ಮೆರಿಟ್ ಅನ್ವಯ ವಿವಿಧ ವರ್ಗಗಳ ಅಭ್ಯರ್ಥಿಗಳನ್ನು ನಿಯೋಜಿಸಲಾಗುತ್ತದೆ’ ಎಂದು ವಿವರಿಸಿದ್ದಾರೆ.</p>.<p>‘ಯುಪಿಎಸ್ಸಿ ರಹಸ್ಯವಾಗಿ ಮೀಸಲು ಪಟ್ಟಿಯನ್ನು ಸಹ ಸಿದ್ಧಪಡಿಸುತ್ತದೆ. ಈ ಪಟ್ಟಿಯಲ್ಲಿ ಸಾಮಾನ್ಯ ಮತ್ತು ಮೀಸಲಾತಿ ಪಡೆದ ಅಭ್ಯರ್ಥಿಗಳ ವಿವರ ಇರುತ್ತದೆ. ಮೊದಲ ಹಂತದಲ್ಲಿ ವಿವಿಧ ಸೇವೆಗಳಿಗೆ ಅಭ್ಯರ್ಥಿಗಳನ್ನು ನಿಯೋಜಿಸಿದ ನಂತರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಕೋರಿಕೆಯಂತೆ ಮತ್ತೆ ಮೀಸಲು ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಹೆಸರುಗಳನ್ನು ನೇಮಕಕ್ಕೆ ಶಿಫಾರಸು ಮಾಡಲಾಗುತ್ತದೆ’ ಎಂದು ವಿವರಿಸಿದ್ದಾರೆ.</p>.<p>ಈ ಬಗ್ಗೆ 2019ರ ಪರೀಕ್ಷೆ ಫಲಿತಾಂಶದ ಉದಾರಣೆ ಸಮೇತ ವಿವರಗಳನ್ನು ಪ್ರಸ್ತಾಪಿಸಿ ಉತ್ತರ ನೀಡಿರುವ ಸಚಿವರು, ‘ಯುಪಿಎಸ್ಸಿ ಕಳೆದ ವರ್ಷ ಆಗಸ್ಟ್ 4ರಂದು ಫಲಿತಾಂಶ ಪ್ರಕಟಿಸಿತ್ತು. ಇದರಲ್ಲಿ 829 ಅಭ್ಯರ್ಥಿಗಳು ಯಶಸ್ವಿಯಾಗಿದ್ದರು. ನಂತರ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಕೋರಿಕೆ ಮೇರೆಗೆ ಯುಪಿಎಸ್ಸಿ ಈ ವರ್ಷ ಜನವರಿ 4ರಂದು ಮತ್ತೆ 89 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಈ ಅಭ್ಯರ್ಥಿಗಳು ಮೀಸಲು ಪಟ್ಟಿಯಲ್ಲಿದ್ದರು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>