<p><strong>ನವದೆಹಲಿ:</strong> ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಕೊನೆಯ ಅಭ್ಯರ್ಥಿ ಪಡೆದದ್ದಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ ಮೀಸಲಾತಿ ಇರುವ ಅಭ್ಯರ್ಥಿಯನ್ನು ‘ಸಾಮಾನ್ಯ ವರ್ಗ’ದಡಿ ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.</p>.<p>‘ಮೀಸಲಾತಿ ಇರುವ ವರ್ಗಗಳ ಅಭ್ಯರ್ಥಿಗಳು ಅರ್ಹತೆ ಹಾಗೂ ತಾವು ಪಡೆದ ಸ್ಥಾನದ ಕಾರಣಗಳಿಂದಾಗಿ ಮೀಸಲಾತಿ ಇಲ್ಲದ ಹುದ್ದೆಗಳಿಗೆ ಆಯ್ಕೆಯಾಗುವಂತಿದ್ದರೆ, ಆ ಅಭ್ಯರ್ಥಿಗಳು ಸಾಮಾನ್ಯ ವರ್ಗದಲ್ಲಿನ ಹುದ್ದೆಗಳನ್ನೇ ಆಯ್ಕೆ ಮಾಡಿಕೊಳ್ಳಬಹುದು’ ಎಂದು ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ ತಿಳಿಸಿದೆ.</p>.<p>1992ರ ಇಂದಿರಾ ಸಾಹ್ನಿ ಪ್ರಕರಣದಿಂದ ಹಿಡಿದು ಸೌರವ್ ಯಾದವ್ (2021) ಹಾಗೂ ಸಾಧನಾಸಿಂಗ್ ಡಾಂಗಿ ಪ್ರಕರಣದವರೆಗೆ (2022) ಪಾಲಿಸಲಾದ ನಿಯಮಗಳನ್ನೇ ನ್ಯಾಯಪೀಠವು ಈ ಪ್ರಕರಣಕ್ಕೂ ಅನ್ವಯಿಸಿತು.</p>.<p>ರಾಜಸ್ಥಾನದಲ್ಲಿ ಬಿಎಸ್ಎನ್ಎಲ್ನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ನಡೆದ ನೇಮಕಾತಿಯಲ್ಲಿ ಮೀಸಲಾತಿಯ ಇಬ್ಬರು ಅಭ್ಯರ್ಥಿಗಳು ಸಾಮಾನ್ಯ ವರ್ಗದವರ ಪೈಕಿ ಕೊನೆಯ ಅಭ್ಯರ್ಥಿಗಿಂತ ಹೆಚ್ಚು ಅಂಕ ಗಳಿಸಿದ್ದರೂ ಅವರನ್ನು ಒಬಿಸಿ ವರ್ಗದಡಿ ಪರಿಗಣಿಸಲಾಗಿತ್ತು. ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/delhi-govt-vs-centre-supreme-court-reserves-order-on-power-tussle-932303.html" itemprop="url">ದೆಹಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ವಿವಾದ ಸಾಂವಿಧಾನಿಕ ಪೀಠಕ್ಕೆ: 'ಸುಪ್ರೀಂ' </a></p>.<p>ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಒಬಿಸಿ ಅಭ್ಯರ್ಥಿಯನ್ನು ತಾಂತ್ರಿಕ ಸಹಾಯಕ ಹುದ್ದೆಗೆ ಪರಿಗಣಿಸುವಂತೆ ನಿರ್ದೇಶನ ನೀಡಿತ್ತು. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಬಿಎಸ್ಎನ್ಎಲ್ ಅರ್ಜಿ ಸಲ್ಲಿಸಿತ್ತು. ನ್ಯಾಯಪೀಠವು ಬಿಎಸ್ಎನ್ಎಲ್ನ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.</p>.<p><strong>ಇದನ್ನೂ ಓದಿ–<span style="color:#B22222;"> </span><a class="pj-top-story-small-image-card__content__title pb-1" href="https://www.prajavani.net/business/commerce-news/india-asks-state-firms-to-consider-buying-russian-oil-assets-932340.html" itemprop="url"><span style="color:#B22222;">ರಷ್ಯಾದ ತೈಲ ಕಂಪನಿಗಳಲ್ಲಿ ಹೂಡಿಕೆಗೆ ಕೇಂದ್ರ ಸೂಚನೆ </span></a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಕೊನೆಯ ಅಭ್ಯರ್ಥಿ ಪಡೆದದ್ದಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ ಮೀಸಲಾತಿ ಇರುವ ಅಭ್ಯರ್ಥಿಯನ್ನು ‘ಸಾಮಾನ್ಯ ವರ್ಗ’ದಡಿ ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.</p>.<p>‘ಮೀಸಲಾತಿ ಇರುವ ವರ್ಗಗಳ ಅಭ್ಯರ್ಥಿಗಳು ಅರ್ಹತೆ ಹಾಗೂ ತಾವು ಪಡೆದ ಸ್ಥಾನದ ಕಾರಣಗಳಿಂದಾಗಿ ಮೀಸಲಾತಿ ಇಲ್ಲದ ಹುದ್ದೆಗಳಿಗೆ ಆಯ್ಕೆಯಾಗುವಂತಿದ್ದರೆ, ಆ ಅಭ್ಯರ್ಥಿಗಳು ಸಾಮಾನ್ಯ ವರ್ಗದಲ್ಲಿನ ಹುದ್ದೆಗಳನ್ನೇ ಆಯ್ಕೆ ಮಾಡಿಕೊಳ್ಳಬಹುದು’ ಎಂದು ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ ತಿಳಿಸಿದೆ.</p>.<p>1992ರ ಇಂದಿರಾ ಸಾಹ್ನಿ ಪ್ರಕರಣದಿಂದ ಹಿಡಿದು ಸೌರವ್ ಯಾದವ್ (2021) ಹಾಗೂ ಸಾಧನಾಸಿಂಗ್ ಡಾಂಗಿ ಪ್ರಕರಣದವರೆಗೆ (2022) ಪಾಲಿಸಲಾದ ನಿಯಮಗಳನ್ನೇ ನ್ಯಾಯಪೀಠವು ಈ ಪ್ರಕರಣಕ್ಕೂ ಅನ್ವಯಿಸಿತು.</p>.<p>ರಾಜಸ್ಥಾನದಲ್ಲಿ ಬಿಎಸ್ಎನ್ಎಲ್ನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ನಡೆದ ನೇಮಕಾತಿಯಲ್ಲಿ ಮೀಸಲಾತಿಯ ಇಬ್ಬರು ಅಭ್ಯರ್ಥಿಗಳು ಸಾಮಾನ್ಯ ವರ್ಗದವರ ಪೈಕಿ ಕೊನೆಯ ಅಭ್ಯರ್ಥಿಗಿಂತ ಹೆಚ್ಚು ಅಂಕ ಗಳಿಸಿದ್ದರೂ ಅವರನ್ನು ಒಬಿಸಿ ವರ್ಗದಡಿ ಪರಿಗಣಿಸಲಾಗಿತ್ತು. ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/delhi-govt-vs-centre-supreme-court-reserves-order-on-power-tussle-932303.html" itemprop="url">ದೆಹಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ವಿವಾದ ಸಾಂವಿಧಾನಿಕ ಪೀಠಕ್ಕೆ: 'ಸುಪ್ರೀಂ' </a></p>.<p>ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಒಬಿಸಿ ಅಭ್ಯರ್ಥಿಯನ್ನು ತಾಂತ್ರಿಕ ಸಹಾಯಕ ಹುದ್ದೆಗೆ ಪರಿಗಣಿಸುವಂತೆ ನಿರ್ದೇಶನ ನೀಡಿತ್ತು. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಬಿಎಸ್ಎನ್ಎಲ್ ಅರ್ಜಿ ಸಲ್ಲಿಸಿತ್ತು. ನ್ಯಾಯಪೀಠವು ಬಿಎಸ್ಎನ್ಎಲ್ನ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.</p>.<p><strong>ಇದನ್ನೂ ಓದಿ–<span style="color:#B22222;"> </span><a class="pj-top-story-small-image-card__content__title pb-1" href="https://www.prajavani.net/business/commerce-news/india-asks-state-firms-to-consider-buying-russian-oil-assets-932340.html" itemprop="url"><span style="color:#B22222;">ರಷ್ಯಾದ ತೈಲ ಕಂಪನಿಗಳಲ್ಲಿ ಹೂಡಿಕೆಗೆ ಕೇಂದ್ರ ಸೂಚನೆ </span></a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>