ನವದೆಹಲಿ: ಮಹಾರಾಷ್ಟ್ರ ವಿಧಾನಸಭೆಯ ಕಲಾಪದ ವೇಳೆ ಸ್ಪೀಕರ್ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಒಂದು ವರ್ಷದವರೆಗೆ ಸದನದಿಂದ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) 12 ಶಾಸಕರ ಅಮಾನತು ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ಒಂದು ಅಧಿವೇಶನಕ್ಕಿಂತಲೂ ಹೆಚ್ಚು ಕಾಲ ಶಾಸಕರನ್ನು ಅಮಾನತು ಮಾಡಿರುವುದು 'ಅಸಾಂವಿಧಾನಿಕ', 'ಕಾನೂನು ಬಾಹಿರ' ಮತ್ತು 'ವಿಚಾರಹೀನ' ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದಾಗಿ ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿಮೈತ್ರಿಕೂಟಕ್ಕೆ ತೀವ್ರ ಮುಖಭಂಗ ಎದುರಾಗಿದೆ.
Supreme Court quashes one-year suspension from the Maharashtra Legislative Assembly of 12 BJP MLAs while terming it unconstitutional and arbitrary. MLAs were suspended for one year for allegedly misbehaving with the presiding officer. pic.twitter.com/LsXiT9MtNR