ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದ ಎಲ್.ಮುರುಗನ್ ಅವರು, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವರಾಗಿದ್ದಾರೆ. ಎಲ್ಲ ಮಾಧ್ಯಮವೂ ಅವರ ಕೈಕೆಳಗೇ ಬರುತ್ತದೆ ಎಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಅಣ್ಣಾಮಲೈ ಹೇಳಿದ್ಧಾರೆ. ‘ಸುಳ್ಳು ಸುದ್ದಿಯನ್ನೇ ಮುಂದಿಟ್ಟುಕೊಂಡು ದೀರ್ಘ ಕಾಲ ರಾಜಕಾರಣ ಮಾಡಲಾಗದು’ ಎಂದಿದ್ದಾರೆ.