<p><strong>ಲಖನೌ</strong>: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ತನಿಖೆಯನ್ನು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಂದ ನಡೆಸಲಾಗುತ್ತದೆ ಎಂದು ಪ್ರಕಟಿಸಿರುವ ಉತ್ತರ ಪ್ರದೇಶ ಸರ್ಕಾರ, ಮೃತ ರೈತರ ಕುಟುಂಬಗಳಿಗೆ ತಲಾ ₹45 ಲಕ್ಷ ಪರಿಹಾರ ಘೋಷಿಸಿದೆ.</p>.<p>‘ಘಟನೆಯಲ್ಲಿಗಾಯಗೊಂಡವರಿಗೆ ₹10 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ, ಮೃತ ರೈತರ ಕುಟುಂಬದ ಒಬ್ಬರು ಸದಸ್ಯರಿಗೆ ಸ್ಥಳೀಯ ಹಂತದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ‘ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ ಹೇಳಿದರು.</p>.<p>‘ಈ ಎಲ್ಲ ಮಾಹಿತಿಗಳಿರುವ ಒಪ್ಪಂದ ಪತ್ರವನ್ನು ರೈತರಿಗೆ ತಲುಪಿಸಲಾಗಿದೆ‘ ಎಂದು ಅವಸ್ಥಿ ತಿಳಿಸಿದರು.</p>.<p>ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಮತ್ತು ನಾಲ್ವರ ಬಿಜೆಪಿ ಕಾರ್ಯಕರ್ತರು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದರು. ಉದ್ರಿಕ್ತ ರೈತರ ಗುಂಪು ಎರಡು ಎಸ್ಯುವಿ ಕಾರುಗಳಿಗೆ ಬೆಂಕಿ ಹಚ್ಚಿತ್ತು. ಘಟನೆಗೆ ಸಂಬಂಧಿಸಿದಂತೆ ಎರಡು ಎಫ್ಐಆರ್ಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ತನಿಖೆಯನ್ನು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಂದ ನಡೆಸಲಾಗುತ್ತದೆ ಎಂದು ಪ್ರಕಟಿಸಿರುವ ಉತ್ತರ ಪ್ರದೇಶ ಸರ್ಕಾರ, ಮೃತ ರೈತರ ಕುಟುಂಬಗಳಿಗೆ ತಲಾ ₹45 ಲಕ್ಷ ಪರಿಹಾರ ಘೋಷಿಸಿದೆ.</p>.<p>‘ಘಟನೆಯಲ್ಲಿಗಾಯಗೊಂಡವರಿಗೆ ₹10 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ, ಮೃತ ರೈತರ ಕುಟುಂಬದ ಒಬ್ಬರು ಸದಸ್ಯರಿಗೆ ಸ್ಥಳೀಯ ಹಂತದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗುತ್ತದೆ‘ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ ಹೇಳಿದರು.</p>.<p>‘ಈ ಎಲ್ಲ ಮಾಹಿತಿಗಳಿರುವ ಒಪ್ಪಂದ ಪತ್ರವನ್ನು ರೈತರಿಗೆ ತಲುಪಿಸಲಾಗಿದೆ‘ ಎಂದು ಅವಸ್ಥಿ ತಿಳಿಸಿದರು.</p>.<p>ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಮತ್ತು ನಾಲ್ವರ ಬಿಜೆಪಿ ಕಾರ್ಯಕರ್ತರು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದರು. ಉದ್ರಿಕ್ತ ರೈತರ ಗುಂಪು ಎರಡು ಎಸ್ಯುವಿ ಕಾರುಗಳಿಗೆ ಬೆಂಕಿ ಹಚ್ಚಿತ್ತು. ಘಟನೆಗೆ ಸಂಬಂಧಿಸಿದಂತೆ ಎರಡು ಎಫ್ಐಆರ್ಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>