<p><strong>ಲಖನೌ:</strong> ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಯಾಗರಾಜ್ನಲ್ಲಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮದಲ್ಲಿ ಗುರುವಾರ ಪುಣ್ಯಸ್ನಾನ ಮಾಡಿ, ಮನಕಾಮೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಗಮನ ಸೆಳೆದರು.</p>.<p>ಕಾಂಗ್ರೆಸ್ ಪಕ್ಷ ಮುಸ್ಲಿಂ ಪಕ್ಷಪಾತಿ ಅಲ್ಲ ಹಾಗೂ ಮೃದು ಹಿಂದುತ್ವ ಪಾಲಿಸುತ್ತದೆ ಎಂಬ ಸಂದೇಶವನ್ನು ಪ್ರಿಯಾಂಕಾ ಅವರು ಈ ನಡೆ ಮೂಲಕ ರವಾನಿಸುವ ಪ್ರಯತ್ನ ಮಾಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.</p>.<p>ಮೌನಿ ಅಮಾವಾಸ್ಯೆಯಂದು ದೇಶದ ಹಲವೆಡೆ ನದಿಗಳ ಸಂಗಮ ಸ್ಥಳದಲ್ಲಿ ಜನರು ಪುಣ್ಯಸ್ನಾನ ಮಾಡುವ ರೂಢಿ ಇದೆ.</p>.<p>ಪುತ್ರಿ ಮಿರಾಯಾಳೊಂದಿಗೆ ಪುಣ್ಯಸ್ನಾನ ಮಾಡಿದ ಪ್ರಿಯಾಂಕಾ, ಸಂಪ್ರದಾಯದಂತೆ ನದಿ ದಡದಲ್ಲಿ ಕಾಯಿ ಒಡೆದು, ಹೂ ಅರ್ಪಿಸಿ ಪೂಜೆ ನೆರವೇರಿಸಿದರು. ಮುಂಗೈಯಲ್ಲಿ ರುದ್ರಾಕ್ಷ ಮಣಿಯನ್ನೂ ಧರಿಸಿದ್ದರು.</p>.<p>ಮನಕಾಮೇಶ್ವರ ದೇವಸ್ಥಾನಕ್ಕೆ ತೆರಳಿ, ದೇವರ ದರ್ಶನ ಪಡೆದ ನಂತರ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರನ್ನೂ ಭೇಟಿಯಾಗಿ, ಆಶೀರ್ವಾದ ಪಡೆದರು.</p>.<p>ಇದಕ್ಕೂ ಮೊದಲು ಅವರು ಇಲ್ಲಿನ ಆನಂದಭವನದಲ್ಲಿರುವ ಜವಾಹರಲಾಲ್ ನೆಹರು ಸ್ಮೃತಿ ಸ್ಥಳಕ್ಕೆ ಭೇಟಿ ನೀಡಿ, ಪುಷ್ಪನಮನ ಸಲ್ಲಿಸಿದರು. ಅಲ್ಲಿರುವ ಅನಾಥಾಶ್ರಮದ ಮಕ್ಕಳೊಂದಿಗೆ ಕೆಲ ಕಾಲ ಕಳೆದರು.</p>.<p>ಈ ಎಲ್ಲ ಸಂದರ್ಭಗಳಲ್ಲಿ ಅವರು ಮಾಧ್ಯಮಗಳೊಂದಿಗೆ ಅಂತರ ಕಾಯ್ದುಕೊಂಡರು. ಕೆಲವೊಮ್ಮೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆಗಳನ್ನು ಕೇಳಿದರೂ ಅವರು ಉತ್ತರಿಸದೇ ಮುಂದೆ ಸಾಗಿದರು.</p>.<p>ಬುಧವಾರ ಅವರು ಸಹಾರನ್ಪುರದಲ್ಲಿರುವ ಶಾಕಾಂಬರಿ ದೇವಿ ದೇವಸ್ಥಾನಕ್ಕೆ ತೆರಳಿ, ಪೂಜೆ ನೆರವೇರಿಸಿದ್ದರು.</p>.<p>ಪುಣ್ಯಸ್ನಾನ ಮಾಡಿ, ದೇವಸ್ಥಾನಕ್ಕೆ ಭೇಟಿ ನೀಡಿರುವ ಪ್ರಿಯಾಂಕಾ ಅವರ ಈ ನಡೆಗೆ ಅನೇಕ ಮಠಾಧೀಶರಿಂದ ಮೆಚ್ಚುಗೆ ವ್ಯಕ್ತವಾಗಿದೆ. ‘ಪಕ್ಷದ ನಾಯಕರು ಇದೇ ರೀತಿ ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ಮುಂದುವರಿಸಿದ್ದೇ ಆದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬಹುದು’ ಎಂದು ಮಠಾಧೀಶರೊಬ್ಬರು ಅಭಿಪ್ರಾಯಪಟ್ಟರು.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು, ‘ಕೇಸರಿ ಪಕ್ಷವು ತೋರಿರುವ ಮಾರ್ಗದಲ್ಲಿ ಈಗ ಕಾಂಗ್ರೆಸ್ ಸಾಗುತ್ತಿದೆ ಎಂಬುದಕ್ಕೆ ಪ್ರಿಯಾಂಕಾ ಗಾಂಧಿ ಅವರ ಈ ನಡೆ ಸಾಕ್ಷಿ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಯಾಗರಾಜ್ನಲ್ಲಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮದಲ್ಲಿ ಗುರುವಾರ ಪುಣ್ಯಸ್ನಾನ ಮಾಡಿ, ಮನಕಾಮೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಗಮನ ಸೆಳೆದರು.</p>.<p>ಕಾಂಗ್ರೆಸ್ ಪಕ್ಷ ಮುಸ್ಲಿಂ ಪಕ್ಷಪಾತಿ ಅಲ್ಲ ಹಾಗೂ ಮೃದು ಹಿಂದುತ್ವ ಪಾಲಿಸುತ್ತದೆ ಎಂಬ ಸಂದೇಶವನ್ನು ಪ್ರಿಯಾಂಕಾ ಅವರು ಈ ನಡೆ ಮೂಲಕ ರವಾನಿಸುವ ಪ್ರಯತ್ನ ಮಾಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.</p>.<p>ಮೌನಿ ಅಮಾವಾಸ್ಯೆಯಂದು ದೇಶದ ಹಲವೆಡೆ ನದಿಗಳ ಸಂಗಮ ಸ್ಥಳದಲ್ಲಿ ಜನರು ಪುಣ್ಯಸ್ನಾನ ಮಾಡುವ ರೂಢಿ ಇದೆ.</p>.<p>ಪುತ್ರಿ ಮಿರಾಯಾಳೊಂದಿಗೆ ಪುಣ್ಯಸ್ನಾನ ಮಾಡಿದ ಪ್ರಿಯಾಂಕಾ, ಸಂಪ್ರದಾಯದಂತೆ ನದಿ ದಡದಲ್ಲಿ ಕಾಯಿ ಒಡೆದು, ಹೂ ಅರ್ಪಿಸಿ ಪೂಜೆ ನೆರವೇರಿಸಿದರು. ಮುಂಗೈಯಲ್ಲಿ ರುದ್ರಾಕ್ಷ ಮಣಿಯನ್ನೂ ಧರಿಸಿದ್ದರು.</p>.<p>ಮನಕಾಮೇಶ್ವರ ದೇವಸ್ಥಾನಕ್ಕೆ ತೆರಳಿ, ದೇವರ ದರ್ಶನ ಪಡೆದ ನಂತರ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರನ್ನೂ ಭೇಟಿಯಾಗಿ, ಆಶೀರ್ವಾದ ಪಡೆದರು.</p>.<p>ಇದಕ್ಕೂ ಮೊದಲು ಅವರು ಇಲ್ಲಿನ ಆನಂದಭವನದಲ್ಲಿರುವ ಜವಾಹರಲಾಲ್ ನೆಹರು ಸ್ಮೃತಿ ಸ್ಥಳಕ್ಕೆ ಭೇಟಿ ನೀಡಿ, ಪುಷ್ಪನಮನ ಸಲ್ಲಿಸಿದರು. ಅಲ್ಲಿರುವ ಅನಾಥಾಶ್ರಮದ ಮಕ್ಕಳೊಂದಿಗೆ ಕೆಲ ಕಾಲ ಕಳೆದರು.</p>.<p>ಈ ಎಲ್ಲ ಸಂದರ್ಭಗಳಲ್ಲಿ ಅವರು ಮಾಧ್ಯಮಗಳೊಂದಿಗೆ ಅಂತರ ಕಾಯ್ದುಕೊಂಡರು. ಕೆಲವೊಮ್ಮೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆಗಳನ್ನು ಕೇಳಿದರೂ ಅವರು ಉತ್ತರಿಸದೇ ಮುಂದೆ ಸಾಗಿದರು.</p>.<p>ಬುಧವಾರ ಅವರು ಸಹಾರನ್ಪುರದಲ್ಲಿರುವ ಶಾಕಾಂಬರಿ ದೇವಿ ದೇವಸ್ಥಾನಕ್ಕೆ ತೆರಳಿ, ಪೂಜೆ ನೆರವೇರಿಸಿದ್ದರು.</p>.<p>ಪುಣ್ಯಸ್ನಾನ ಮಾಡಿ, ದೇವಸ್ಥಾನಕ್ಕೆ ಭೇಟಿ ನೀಡಿರುವ ಪ್ರಿಯಾಂಕಾ ಅವರ ಈ ನಡೆಗೆ ಅನೇಕ ಮಠಾಧೀಶರಿಂದ ಮೆಚ್ಚುಗೆ ವ್ಯಕ್ತವಾಗಿದೆ. ‘ಪಕ್ಷದ ನಾಯಕರು ಇದೇ ರೀತಿ ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ಮುಂದುವರಿಸಿದ್ದೇ ಆದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬಹುದು’ ಎಂದು ಮಠಾಧೀಶರೊಬ್ಬರು ಅಭಿಪ್ರಾಯಪಟ್ಟರು.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು, ‘ಕೇಸರಿ ಪಕ್ಷವು ತೋರಿರುವ ಮಾರ್ಗದಲ್ಲಿ ಈಗ ಕಾಂಗ್ರೆಸ್ ಸಾಗುತ್ತಿದೆ ಎಂಬುದಕ್ಕೆ ಪ್ರಿಯಾಂಕಾ ಗಾಂಧಿ ಅವರ ಈ ನಡೆ ಸಾಕ್ಷಿ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>