ಈ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ, "ಧಾರ್ಮಿಕ ವಿಧಿಗಳು ಸಾರ್ವಜನಿಕ ಹಿತಾಸಕ್ತಿ ಮತ್ತು ಜೀವನದ ಹಕ್ಕಿಗೆ ಒಳಪಟ್ಟಿರಬೇಕು. ಧಾರ್ಮಿಕ ಹಕ್ಕು ಜೀವನದ ಹಕ್ಕಿಗಿಂತ ದೊಡ್ಡದಲ್ಲ... ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇದರಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ," ಎಂದು ಮೌಖಿಕವಾಗಿ ಹೇಳಿದ್ದಾರೆ.