<p><strong>ತಿರುವನಂತಪುರ:</strong> ವಿಳಿಂಞ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 3,000 ಮಂದಿಯ ವಿರುದ್ಧ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಅದಾನಿ ಬಂದರು ನಿರ್ಮಾಣ ವಿರೋಧಿಸಿ ಚರ್ಚ್ ನೇತೃತ್ವದ ಉದ್ರಿಕ್ತರ ಗುಂಪು ಪೊಲೀಸ್ ಠಾಣೆ ಮೇಲೆ ಭಾನುವಾರ ರಾತ್ರಿ ದಾಳಿ ನಡೆಸಿದ ಪರಿಣಾಮ 40 ಮಂದಿ ಪೊಲೀಸರು ಗಾಯಗೊಂಡಿದ್ದರು.</p>.<p>‘ಪೊಲೀಸರು ವಶಕ್ಕೆ ಪಡೆದಿದ್ದ ಆರೊಪಿಗಳನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ 3,000 ಮಂದಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸ್ ವಾಹನಗಳಿಗೆ ಹಾಗೂ ಠಾಣೆಗೆ ಹಾನಿ ಎಸಗಿದ್ದಾರೆ’ ಎಂದು ಪೊಲೀಸರು ಎಫ್ಐಆರ್ನಲ್ಲಿ ಹೇಳಿದ್ದಾರೆ.</p>.<p>‘ಜನರ ಗುಂಪು ಕಟ್ಟಿಗೆ ಮತ್ತು ಇಟ್ಟಿಗೆಯಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದೆ’ ಎಂದಿದ್ದಾರೆ.</p>.<p>ಪ್ರತಿಭಟನಕಾರರು ಮಾಧ್ಯಮ ಪ್ರತಿನಿಧಿಗಳ ಮೇಲೂ ಹಲ್ಲೆ ನಡೆಸಿದ್ದಾರೆ ಎಂದೂ ಆರೋಪಿಸಲಾಗಿದೆ.</p>.<p>‘ಬಾಹ್ಯ ಶಕ್ತಿಗಳ ಕೈವಾಡ’: ವಿಳಿಂಞ ಪೊಲೀಸ್ ಠಾಣೆ ಮೇಲೆ ನಡೆದಿರುವ ದಾಳಿಯ ಹಿಂದೆ ‘ಬಾಹ್ಯ ಶಕ್ತಿಗಳ’ ಕೈವಾಡವಿದೆ ಎಂದು ಲ್ಯಾಟಿನ್ ಕೆಥೋಲಿಕ್ ಚರ್ಚ್ ಆರೋಪಿಸಿದೆ. ಈ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದೂ ಆಗ್ರಹಿಸಿದೆ.</p>.<p>ಬಂದರು ನಿರ್ಮಾಣ ವಿರೋಧಿ ಪ್ರತಿಭಟನೆಯುಲ್ಯಾಟಿನ್ ಕೆಥೋಲಿಕ್ ಚರ್ಚ್ ನೇತೃತ್ವದಲ್ಲಿ ನಡೆದಿತ್ತು.</p>.<p>‘ಸರ್ಕಾರವು ಇದುವರೆಗೆ ಬಹಳ ತಾಳ್ಮೆಯಿಂದ ವರ್ತಿಸಿದೆ. ಆದರೆ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿರುವುದು ಸ್ವೀಕಾರಾರ್ಹವಲ್ಲ’ ಎಂದು ಕೇರಳದ ಬಂದರು ಸಚಿವ ಅಹಮ್ಮದ್ ದೇವರಕೋವಿಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ವಿಳಿಂಞ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 3,000 ಮಂದಿಯ ವಿರುದ್ಧ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಅದಾನಿ ಬಂದರು ನಿರ್ಮಾಣ ವಿರೋಧಿಸಿ ಚರ್ಚ್ ನೇತೃತ್ವದ ಉದ್ರಿಕ್ತರ ಗುಂಪು ಪೊಲೀಸ್ ಠಾಣೆ ಮೇಲೆ ಭಾನುವಾರ ರಾತ್ರಿ ದಾಳಿ ನಡೆಸಿದ ಪರಿಣಾಮ 40 ಮಂದಿ ಪೊಲೀಸರು ಗಾಯಗೊಂಡಿದ್ದರು.</p>.<p>‘ಪೊಲೀಸರು ವಶಕ್ಕೆ ಪಡೆದಿದ್ದ ಆರೊಪಿಗಳನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ 3,000 ಮಂದಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸ್ ವಾಹನಗಳಿಗೆ ಹಾಗೂ ಠಾಣೆಗೆ ಹಾನಿ ಎಸಗಿದ್ದಾರೆ’ ಎಂದು ಪೊಲೀಸರು ಎಫ್ಐಆರ್ನಲ್ಲಿ ಹೇಳಿದ್ದಾರೆ.</p>.<p>‘ಜನರ ಗುಂಪು ಕಟ್ಟಿಗೆ ಮತ್ತು ಇಟ್ಟಿಗೆಯಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದೆ’ ಎಂದಿದ್ದಾರೆ.</p>.<p>ಪ್ರತಿಭಟನಕಾರರು ಮಾಧ್ಯಮ ಪ್ರತಿನಿಧಿಗಳ ಮೇಲೂ ಹಲ್ಲೆ ನಡೆಸಿದ್ದಾರೆ ಎಂದೂ ಆರೋಪಿಸಲಾಗಿದೆ.</p>.<p>‘ಬಾಹ್ಯ ಶಕ್ತಿಗಳ ಕೈವಾಡ’: ವಿಳಿಂಞ ಪೊಲೀಸ್ ಠಾಣೆ ಮೇಲೆ ನಡೆದಿರುವ ದಾಳಿಯ ಹಿಂದೆ ‘ಬಾಹ್ಯ ಶಕ್ತಿಗಳ’ ಕೈವಾಡವಿದೆ ಎಂದು ಲ್ಯಾಟಿನ್ ಕೆಥೋಲಿಕ್ ಚರ್ಚ್ ಆರೋಪಿಸಿದೆ. ಈ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದೂ ಆಗ್ರಹಿಸಿದೆ.</p>.<p>ಬಂದರು ನಿರ್ಮಾಣ ವಿರೋಧಿ ಪ್ರತಿಭಟನೆಯುಲ್ಯಾಟಿನ್ ಕೆಥೋಲಿಕ್ ಚರ್ಚ್ ನೇತೃತ್ವದಲ್ಲಿ ನಡೆದಿತ್ತು.</p>.<p>‘ಸರ್ಕಾರವು ಇದುವರೆಗೆ ಬಹಳ ತಾಳ್ಮೆಯಿಂದ ವರ್ತಿಸಿದೆ. ಆದರೆ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿರುವುದು ಸ್ವೀಕಾರಾರ್ಹವಲ್ಲ’ ಎಂದು ಕೇರಳದ ಬಂದರು ಸಚಿವ ಅಹಮ್ಮದ್ ದೇವರಕೋವಿಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>