ಕೋವಿಡ್ ಪ್ರಕರಣಗಳು ಕ್ಷಿಪ್ರವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ, ತಾತ್ಕಾಲಿಕ ಆಸ್ಪತ್ರೆಗಳ ನಿರ್ಮಾಣ ಆರಂಭಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಶನಿವಾರ ನಿರ್ದೇಶನ ನೀಡಿದೆ. ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ತುರ್ತಾಗಿ ಮೇಲ್ದರ್ಜೆಗೆ ಏರಿಸಬೇಕಿರುವುದು ಸದ್ಯದ ಅಗತ್ಯ ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಒತ್ತಿ ಹೇಳಿದ್ದಾರೆ. ಆಸ್ಪತ್ರೆಗಳನ್ನು ಶೀಘ್ರವಾಗಿ ನಿರ್ಮಿಸಲು ಡಿಆರ್ಡಿಒ, ಸಿಎಸ್ಐಆರ್, ಖಾಸಗಿಯವರು, ಎನ್ಜಿಒಗಳ ನೆರವು ಪಡೆಯಬೇಕು ಎಂದು ಸೂಚಿಸಿದ್ದಾರೆ.