<p><strong>ನವದೆಹಲಿ</strong>: ಕೋವಿಡ್ 19 ಮತ್ತು ಇನ್ಪ್ಲೂಯೆಂಜಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಏಪ್ರಿಲ್ 10 ಮತ್ತು 11ರಂದು ದೇಶದಾದ್ಯಂತ ಆಸ್ಪತ್ರೆಗಳಲ್ಲಿ ಸಿದ್ಧತಾ ಅಭಿಯಾನ ಹಮ್ಮಿಕೊಳ್ಳಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.</p>.<p>ಎಲ್ಲಾ ಜಿಲ್ಲೆಗಳ ಖಾಸಗಿ ಮತ್ತು ಸಾರ್ವಜನಿಕ ಆರೋಗ್ಯ ಸೌಲಭ್ಯಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು (ಐಸಿಎಂಆರ್) ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.</p>.<p>ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯತೆ, ಆಮ್ಲಜನಕ ಮತ್ತು ಔಷಧಿಗಳ ದಾಸ್ತಾನು ಸಮರ್ಪಕವಾಗಿವೆಯೇ ಎಂಬುದನ್ನು ಪರಿಶೀಲಿಸುವುದು ಈ ಅಭಿಯಾನದ ಉದ್ದೇಶ ಎಂದೂ ಹೇಳಿದೆ.</p>.<p>ಮಾರ್ಚ್ 27ರಂದು ವರ್ಚುವಲ್ ಸಭೆಯ ಮೂಲಕ ಅಭಿಯಾನದ ಮಾಹಿತಿಯನ್ನು ರಾಜ್ಯಗಳಿಗೆ ನೀಡಲಾಗುವುದು ಎಂದೂ ತಿಳಿಸಿದೆ.</p>.<p><strong>ಭಯ ಬೇಡ, ಬೂಸ್ಟರ್ ಡೋಸ್ ಪಡೆದುಕೊಳ್ಳಿ:</strong></p>.<p>ದೆಹಲಿಯಲ್ಲಿ ಈಚೆಗೆ ಕೋವಿಡ್ ಪ್ರಕರಣಗಳು ಹೆಚ್ಚಾಗಲು ಎಕ್ಸ್ಬಿಬಿ.1.16 ತಳಿ ಕಾರಣ ಎಂದಿರುವ ತಜ್ಞರು, ಜನರು ಭಯಪಡುವ ಅಗತ್ಯವಿಲ್ಲ, ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಇದುವರೆಗೆ ಪಡೆದುಕೊಳ್ಳದವರು ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.</p>.<p>ಒಂದೇ ದಿನ 1,590 ಪ್ರಕರಣಗಳು ದೃಢ</p>.<p>146 ದಿನಗಳ ಬಳಿಕ ದೇಶದಲ್ಲಿ ಒಂದೇ ದಿನ 1,590 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,601ಕ್ಕೆ ಏರಿಕೆಯಾಗಿದೆ.</p>.<p>ಕೋವಿಡ್ನಿಂದಾಗಿ ಮತ್ತೆ ಆರು ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 5,30,824ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಮೂವರು, ಕರ್ನಾಟಕ, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದೂ ವಿವರಿಸಿದೆ.</p>.<p>ಇದನ್ನೂ ಓದಿ..</p>.<p><a href="https://www.prajavani.net/india-news/india-records-1590-fresh-covid-19-cases-highest-in-146-days-1026296.html" itemprop="url">India Covid Updates: ಹೊಸದಾಗಿ 1,590 ಪ್ರಕರಣಗಳು ದೃಢ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್ 19 ಮತ್ತು ಇನ್ಪ್ಲೂಯೆಂಜಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಏಪ್ರಿಲ್ 10 ಮತ್ತು 11ರಂದು ದೇಶದಾದ್ಯಂತ ಆಸ್ಪತ್ರೆಗಳಲ್ಲಿ ಸಿದ್ಧತಾ ಅಭಿಯಾನ ಹಮ್ಮಿಕೊಳ್ಳಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.</p>.<p>ಎಲ್ಲಾ ಜಿಲ್ಲೆಗಳ ಖಾಸಗಿ ಮತ್ತು ಸಾರ್ವಜನಿಕ ಆರೋಗ್ಯ ಸೌಲಭ್ಯಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು (ಐಸಿಎಂಆರ್) ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.</p>.<p>ಆಸ್ಪತ್ರೆಗಳಲ್ಲಿ ಹಾಸಿಗೆ ಲಭ್ಯತೆ, ಆಮ್ಲಜನಕ ಮತ್ತು ಔಷಧಿಗಳ ದಾಸ್ತಾನು ಸಮರ್ಪಕವಾಗಿವೆಯೇ ಎಂಬುದನ್ನು ಪರಿಶೀಲಿಸುವುದು ಈ ಅಭಿಯಾನದ ಉದ್ದೇಶ ಎಂದೂ ಹೇಳಿದೆ.</p>.<p>ಮಾರ್ಚ್ 27ರಂದು ವರ್ಚುವಲ್ ಸಭೆಯ ಮೂಲಕ ಅಭಿಯಾನದ ಮಾಹಿತಿಯನ್ನು ರಾಜ್ಯಗಳಿಗೆ ನೀಡಲಾಗುವುದು ಎಂದೂ ತಿಳಿಸಿದೆ.</p>.<p><strong>ಭಯ ಬೇಡ, ಬೂಸ್ಟರ್ ಡೋಸ್ ಪಡೆದುಕೊಳ್ಳಿ:</strong></p>.<p>ದೆಹಲಿಯಲ್ಲಿ ಈಚೆಗೆ ಕೋವಿಡ್ ಪ್ರಕರಣಗಳು ಹೆಚ್ಚಾಗಲು ಎಕ್ಸ್ಬಿಬಿ.1.16 ತಳಿ ಕಾರಣ ಎಂದಿರುವ ತಜ್ಞರು, ಜನರು ಭಯಪಡುವ ಅಗತ್ಯವಿಲ್ಲ, ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಇದುವರೆಗೆ ಪಡೆದುಕೊಳ್ಳದವರು ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.</p>.<p>ಒಂದೇ ದಿನ 1,590 ಪ್ರಕರಣಗಳು ದೃಢ</p>.<p>146 ದಿನಗಳ ಬಳಿಕ ದೇಶದಲ್ಲಿ ಒಂದೇ ದಿನ 1,590 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,601ಕ್ಕೆ ಏರಿಕೆಯಾಗಿದೆ.</p>.<p>ಕೋವಿಡ್ನಿಂದಾಗಿ ಮತ್ತೆ ಆರು ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 5,30,824ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಮೂವರು, ಕರ್ನಾಟಕ, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದೂ ವಿವರಿಸಿದೆ.</p>.<p>ಇದನ್ನೂ ಓದಿ..</p>.<p><a href="https://www.prajavani.net/india-news/india-records-1590-fresh-covid-19-cases-highest-in-146-days-1026296.html" itemprop="url">India Covid Updates: ಹೊಸದಾಗಿ 1,590 ಪ್ರಕರಣಗಳು ದೃಢ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>