<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ಕೃಷಿ ಮಸೂದೆಗಳಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ರಾಜ್ಯಸಭಾ ಸದಸ್ಯ ಮನೋಜ್ ಝಾ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಈ ಮಸೂದೆಗಳು ರೈತರ ಮರಣ ಶಾಸನವಾಗಿದ್ದು, ರೈತರನ್ನು ಕಾರ್ಪೊರೇಟ್ ಕಂಪನಿಗಳ ಅಡಿಯಾಳುಗಳನ್ನಾಗಿಸಲು ನೆರವಾಗಲಿವೆ ಎಂದು ವಕೀಲ ಫೌಜಿಯಾ ಶಕೀಲ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಅವರು ದೂರಿದ್ದಾರೆ.</p>.<p>ಕೇರಳದ ಕಾಂಗ್ರೆಸ್ ಲೋಕಸಭಾ ಸದಸ್ಯ ಟಿ.ಎನ್.ಪ್ರತಾಪನ್ ಹಾಗೂ ಡಿಎಂಕೆ ರಾಜ್ಯಸಭಾ ಸದಸ್ಯ ತಿರುಚಿ ಶಿವಾ ಅವರೂ ಈ ಮಸೂದೆಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.</p>.<p>‘ಈ ಮಸೂದೆಗಳು ಕೃಷಿಯನ್ನು ಸಾಂಸ್ಥಿಕಗೊಳಿಸಲಿವೆ. ರೈತರಿಗೆ ದೊಡ್ಡ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳ ಜೊತೆ ವ್ಯವಹಾರ ನಡೆಸುವಷ್ಟು ಅರಿವು ಇರುವುದಿಲ್ಲ. ಇದರಿಂದಾಗಿ ಕಾರ್ಪೊರೇಟ್ ಸಂಸ್ಥೆಗಳು ಕೃಷಿ ಕ್ಷೇತ್ರದಲ್ಲಿ ಏಕಸ್ವಾಮ್ಯ ಸಾಧಿಸುವ ಅಪಾಯವಿದೆ’ ಎಂದೂ ಝಾ ಅರ್ಜಿಯಲ್ಲಿ ದೂರಿದ್ದಾರೆ.</p>.<p>‘ಈ ಮಸೂದೆಗಳನ್ನು ಅಂಗೀಕರಿಸುವಾಗಆಡಳಿತರೂಢ ಸರ್ಕಾರವು ಸಂಸದೀಯ ನಿಯಮಗಳನ್ನು ಗಾಳಿಗೆ ತೂರಿದೆ. ಈ ಮಸೂದೆಗಳು ಸಂವಿಧಾನದ ಮೂಲಭೂತ ಆಶಯಗಳಿಗೆ ವಿರುದ್ಧವಾಗಿದೆ’ ಎಂದೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ಕೃಷಿ ಮಸೂದೆಗಳಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ರಾಜ್ಯಸಭಾ ಸದಸ್ಯ ಮನೋಜ್ ಝಾ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಈ ಮಸೂದೆಗಳು ರೈತರ ಮರಣ ಶಾಸನವಾಗಿದ್ದು, ರೈತರನ್ನು ಕಾರ್ಪೊರೇಟ್ ಕಂಪನಿಗಳ ಅಡಿಯಾಳುಗಳನ್ನಾಗಿಸಲು ನೆರವಾಗಲಿವೆ ಎಂದು ವಕೀಲ ಫೌಜಿಯಾ ಶಕೀಲ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಅವರು ದೂರಿದ್ದಾರೆ.</p>.<p>ಕೇರಳದ ಕಾಂಗ್ರೆಸ್ ಲೋಕಸಭಾ ಸದಸ್ಯ ಟಿ.ಎನ್.ಪ್ರತಾಪನ್ ಹಾಗೂ ಡಿಎಂಕೆ ರಾಜ್ಯಸಭಾ ಸದಸ್ಯ ತಿರುಚಿ ಶಿವಾ ಅವರೂ ಈ ಮಸೂದೆಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.</p>.<p>‘ಈ ಮಸೂದೆಗಳು ಕೃಷಿಯನ್ನು ಸಾಂಸ್ಥಿಕಗೊಳಿಸಲಿವೆ. ರೈತರಿಗೆ ದೊಡ್ಡ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳ ಜೊತೆ ವ್ಯವಹಾರ ನಡೆಸುವಷ್ಟು ಅರಿವು ಇರುವುದಿಲ್ಲ. ಇದರಿಂದಾಗಿ ಕಾರ್ಪೊರೇಟ್ ಸಂಸ್ಥೆಗಳು ಕೃಷಿ ಕ್ಷೇತ್ರದಲ್ಲಿ ಏಕಸ್ವಾಮ್ಯ ಸಾಧಿಸುವ ಅಪಾಯವಿದೆ’ ಎಂದೂ ಝಾ ಅರ್ಜಿಯಲ್ಲಿ ದೂರಿದ್ದಾರೆ.</p>.<p>‘ಈ ಮಸೂದೆಗಳನ್ನು ಅಂಗೀಕರಿಸುವಾಗಆಡಳಿತರೂಢ ಸರ್ಕಾರವು ಸಂಸದೀಯ ನಿಯಮಗಳನ್ನು ಗಾಳಿಗೆ ತೂರಿದೆ. ಈ ಮಸೂದೆಗಳು ಸಂವಿಧಾನದ ಮೂಲಭೂತ ಆಶಯಗಳಿಗೆ ವಿರುದ್ಧವಾಗಿದೆ’ ಎಂದೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>