ಎಸ್ಪಿ ಜೊತೆ ಆರ್ಎಲ್ಡಿ ಚುನಾವಾಣಾ ಮೈತ್ರಿ ಘೋಷಣೆ

ಲಖನೌ: ಸಮಾಜವಾದಿ ಪಕ್ಷದ ಜೊತೆ ತಮ್ಮ ಪಕ್ಷ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಾಗಿ ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಅಧ್ಯಕ್ಷ ಜಯಂತ್ ಚೌಧರಿ ಮಂಗಳವಾರ ಔಪಚಾರಿಕವಾಗಿ ಘೋಷಿಸಿದರು.
ಈ ಮೈತ್ರಿಕೂಟವು ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರಿದರೆ, ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಮೃತರಾದ ರೈತರಿಗೆ ಸ್ಮಾರಕ ನಿರ್ಮಿಸಲಿದೆ ಎಂದಿದ್ದಾರೆ.
ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದನ್ನು ಜನರು ಅರಿತಿದ್ದಾರೆ. ಚುನಾವಣೆಯಲ್ಲಿ ಆ ಪಕ್ಷಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದೂ ಜಯಂತ್ ಚೌಧರಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.