ಶುಕ್ರವಾರ ಶೂನ್ಯ ವೇಳೆಯಲ್ಲಿ ರಾಷ್ಟ್ರೀಯ ಲೋಕದಳ (ಆರ್ಎಲ್ಡಿ)ಯ ಜಯಂತ್ ಚೌಧರಿ ಈ ವಿಚಾರವನ್ನು ಪ್ರಸ್ತಾಪಿಸಿದರು. ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ವಾಹನ ಹತ್ತಿಸಿದ ಪ್ರಕರಣದಲ್ಲಿ ಮೃತರಾದ ನಾಲ್ವರು ರೈತರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹಾಗೂ ಗಾಯಗೊಂಡವರಿಗೆ ₹10 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು ಎಂದು ನೆನಪು ಮಾಡಿಕೊಟ್ಟರು.
ಇದೇ ವಾರ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಈ ವಿಚಾರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊಟ್ಟ ಉತ್ತರದಲ್ಲಿ ಭರವಸೆಗಳನ್ನು ಪೂರೈಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ತಿಳಿದುಬಂದಿದೆ ಎಂದು ಜಯಂತ್ ಚೌಧರಿ ಹೇಳಿದರು.