<p><strong>ಜೌನ್ಪುರ:</strong> ‘ಉತ್ತರಪ್ರದೇಶದ ವಾರಾಣಸಿ–ಜೌನ್ಪುರ ಹೆದ್ದಾರಿಯ ಜಲಾಲ್ಪುರ ಬಳಿ ಎರಡು ವಾಹನಗಳ ನಡುವೆ ಸಂಭವಿಸಿದ ಢಿಕ್ಕಿಯಿಂದಾಗಿ ಆರು ಜನರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<p>‘ವಾರಾಣಸಿಯಲ್ಲಿ ಅಂತ್ಯಕ್ರಿಯೆಗೆಂದು ತೆರಳಿದ್ದ 17 ಮಂದಿ ಜೀಪ್ವೊಂದರಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಜೀಪ್ ಮತ್ತು ಟ್ರಕ್ ನಡುವೆ ಢಿಕ್ಕಿ ಸಂಭವಿಸಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ’ ಎಂದು ಅವರು ಹೇಳಿದರು.</p>.<p>ಸಾವಿಗೀಡಾದವರನ್ನು ಅಮರ್ ಬಹದ್ದೂರ್ ಯಾದವ್(58), ರಾಮ್ ಸಿಂಗಾರ್ ಯಾದವ್(38), ಮುನ್ನಿಲಾಲ್(38), ಇಂದ್ರಜೀತ್ ಯಾದವ್(48), ಕಮಲಾ ಪ್ರಸಾದ್ ಯಾದವ್(60) ಮತ್ತು ರಾಮ್ಕುಮಾರ್(65) ಎಂದು ಗುರುತಿಸಲಾಗಿದೆ.</p>.<p>‘ಜಲಾಲ್ಪುರದ ನಿವಾಸಿ ದಾಂಡೇ ದೇವಿ(122) ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಗಾಗಿ ಅಳಿಯ ಲಕ್ಷ್ಮೀ ಶಂಕರ್ ಯಾದವ್ ಅವರು 17 ಮಂದಿಯೊಂದಿಗೆ ವಾರಾಣಸಿಯ ಮಣಿಕರ್ಣಿಕಾ ಘಾಟ್ಗೆ ತೆರಳಿದ್ದರು’ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಅವರು ಮಾಹಿತಿ ನೀಡಿದರು.</p>.<p>‘ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದರು. ಆದರೆ ಈ ವೇಳೆ ಟ್ರಕ್ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೌನ್ಪುರ:</strong> ‘ಉತ್ತರಪ್ರದೇಶದ ವಾರಾಣಸಿ–ಜೌನ್ಪುರ ಹೆದ್ದಾರಿಯ ಜಲಾಲ್ಪುರ ಬಳಿ ಎರಡು ವಾಹನಗಳ ನಡುವೆ ಸಂಭವಿಸಿದ ಢಿಕ್ಕಿಯಿಂದಾಗಿ ಆರು ಜನರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<p>‘ವಾರಾಣಸಿಯಲ್ಲಿ ಅಂತ್ಯಕ್ರಿಯೆಗೆಂದು ತೆರಳಿದ್ದ 17 ಮಂದಿ ಜೀಪ್ವೊಂದರಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಜೀಪ್ ಮತ್ತು ಟ್ರಕ್ ನಡುವೆ ಢಿಕ್ಕಿ ಸಂಭವಿಸಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ’ ಎಂದು ಅವರು ಹೇಳಿದರು.</p>.<p>ಸಾವಿಗೀಡಾದವರನ್ನು ಅಮರ್ ಬಹದ್ದೂರ್ ಯಾದವ್(58), ರಾಮ್ ಸಿಂಗಾರ್ ಯಾದವ್(38), ಮುನ್ನಿಲಾಲ್(38), ಇಂದ್ರಜೀತ್ ಯಾದವ್(48), ಕಮಲಾ ಪ್ರಸಾದ್ ಯಾದವ್(60) ಮತ್ತು ರಾಮ್ಕುಮಾರ್(65) ಎಂದು ಗುರುತಿಸಲಾಗಿದೆ.</p>.<p>‘ಜಲಾಲ್ಪುರದ ನಿವಾಸಿ ದಾಂಡೇ ದೇವಿ(122) ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಗಾಗಿ ಅಳಿಯ ಲಕ್ಷ್ಮೀ ಶಂಕರ್ ಯಾದವ್ ಅವರು 17 ಮಂದಿಯೊಂದಿಗೆ ವಾರಾಣಸಿಯ ಮಣಿಕರ್ಣಿಕಾ ಘಾಟ್ಗೆ ತೆರಳಿದ್ದರು’ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಅವರು ಮಾಹಿತಿ ನೀಡಿದರು.</p>.<p>‘ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದರು. ಆದರೆ ಈ ವೇಳೆ ಟ್ರಕ್ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>