<p><strong>ವಡೋದರ (ಗುಜರಾತ್):</strong> ನಗರದಲ್ಲಿ ಸಂಭವಿಸಿದ ಸಣ್ಣ ಅಪಘಾತವೊಂದು ಕೋಮು ಘರ್ಷಣೆಗೆ ಕಾರಣವಾಗಿದೆ. ಗಲಭೆಕೋರರು ಕಲ್ಲುತೂರಾಟ ನಡೆಸಿದ್ದು, ದೇವಾಲಯವೊಂದನ್ನು ದ್ವಂಸಗೊಳಿಸಿದ್ದಾರೆ. ಹಲವು ವಾಹನಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p>.<p>ಎರಡು ಕೋಮುಗಳಿಗೆ ಸೇರಿದ ವ್ಯಕ್ತಿಗಳ ದ್ವಿಚಕ್ರ ವಾಹನಗಳ ನಡುವೆ ನಗರದ ರಾವ್ಪುರ ಪ್ರದೇಶದಲ್ಲಿ ಭಾನುವಾರ ಅಪಘಾತವಾಗಿತ್ತು. ಇದು ಕೋಮು ಘರ್ಷಣೆಗೆ ಕಾರಣವಾಗಿದೆ. ಸುದ್ದಿ ಹರಡುತ್ತಿದ್ದಂತೆ ಎರಡೂ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಪರಸ್ಪರ ಕಲ್ಲುತೂರಾಟ ಆರಂಭಿಸಿದರು. ಈ ವೇಳೆ, ರಸ್ತೆ ಪಕ್ಕದಲ್ಲಿಯೇ ಇದ್ದ ದೇವಾಲಯದ ವಿಗ್ರಹವನ್ನು ಗುಂಪೊಂದು ದ್ವಂಸಗೊಳಿಸಿದೆ. ಎರಡು ಆಟೋರಿಕ್ಷಾಗಳು ಮತ್ತು ಹಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ ಎಂದು ಕರೇಲಿಬಾಗ್ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಧರ್ಮ ನಿಂದನೆಯ ಉದ್ದೇಶದಿಂದ ಗಲಭೆ ನಡೆಸಿದ್ದು, ಕಾನೂನುಬಾಹಿರವಾಗಿ ಗುಂಪುಗೂಡಿದ್ದು, ಮಾರಕಾಸ್ತ್ರಗಳನ್ನು ಹಿಡಿದು ಅಲೆದಾಡಿದ್ದು ಮತ್ತು ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ ಆರೋಪಗಳ ಮೇಲೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>'ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ, ರಾತ್ರಿಯೇ 15 ಜನರನ್ನು ಬಂಧಿಸಿದ್ದೇವೆ' ಎಂದು ಡಿಸಿಪಿ (ವಲಯ–4) ಪನ್ನ ಮೊಮಯ ತಿಳಿಸಿದ್ಡಾರೆ.</p>.<p>ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು,ಈವರೆಗೆ ಒಟ್ಟು 19 ಜನರನ್ನು ಬಂಧಿಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p><strong>ಇವನ್ನೂ ಓದಿ<br />*</strong><a href="https://cms.prajavani.net/karnataka-news/hubbali-tense-after-muslim-mob-turned-violent-at-old-hubli-police-station-over-hindutva-whatsapp-929405.html" itemprop="url">ಹುಬ್ಬಳ್ಳಿ ಗಲಭೆ: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಏನಿತ್ತು? </a><br /><strong>*</strong><a href="https://www.prajavani.net/karnataka-news/hubli-communal-violence-89-people-arrested-929360.html" itemprop="url" target="_blank">ಹುಬ್ಬಳ್ಳಿ ಗಲಭೆ: ಪೊಲೀಸ್ ಕಟ್ಟೆಚ್ಚರ- 89 ಮಂದಿ ಬಂಧನ</a><br /><strong>*</strong><a href="https://www.prajavani.net/india-news/more-than-20-held-including-two-juveniles-in-connection-with-jahangirpuri-violence-929406.html" itemprop="url" target="_blank">ಜಹಾಂಗಿರ್ಪುರಿ ಹಿಂಸಾಚಾರ: 20 ಜನರ ಬಂಧನ, ಪೊಲೀಸರಿಂದ ಶಾಂತಿಸಭೆ </a><br />*<a href="https://www.prajavani.net/india-news/clash-breaks-out-between-two-groups-during-religious-procession-in-aps-kurnool-929208.html" itemprop="url" target="_blank">ಉತ್ತರಾಖಂಡ, ಆಂಧ್ರದಲ್ಲೂ ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡೋದರ (ಗುಜರಾತ್):</strong> ನಗರದಲ್ಲಿ ಸಂಭವಿಸಿದ ಸಣ್ಣ ಅಪಘಾತವೊಂದು ಕೋಮು ಘರ್ಷಣೆಗೆ ಕಾರಣವಾಗಿದೆ. ಗಲಭೆಕೋರರು ಕಲ್ಲುತೂರಾಟ ನಡೆಸಿದ್ದು, ದೇವಾಲಯವೊಂದನ್ನು ದ್ವಂಸಗೊಳಿಸಿದ್ದಾರೆ. ಹಲವು ವಾಹನಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p>.<p>ಎರಡು ಕೋಮುಗಳಿಗೆ ಸೇರಿದ ವ್ಯಕ್ತಿಗಳ ದ್ವಿಚಕ್ರ ವಾಹನಗಳ ನಡುವೆ ನಗರದ ರಾವ್ಪುರ ಪ್ರದೇಶದಲ್ಲಿ ಭಾನುವಾರ ಅಪಘಾತವಾಗಿತ್ತು. ಇದು ಕೋಮು ಘರ್ಷಣೆಗೆ ಕಾರಣವಾಗಿದೆ. ಸುದ್ದಿ ಹರಡುತ್ತಿದ್ದಂತೆ ಎರಡೂ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಪರಸ್ಪರ ಕಲ್ಲುತೂರಾಟ ಆರಂಭಿಸಿದರು. ಈ ವೇಳೆ, ರಸ್ತೆ ಪಕ್ಕದಲ್ಲಿಯೇ ಇದ್ದ ದೇವಾಲಯದ ವಿಗ್ರಹವನ್ನು ಗುಂಪೊಂದು ದ್ವಂಸಗೊಳಿಸಿದೆ. ಎರಡು ಆಟೋರಿಕ್ಷಾಗಳು ಮತ್ತು ಹಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ ಎಂದು ಕರೇಲಿಬಾಗ್ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಧರ್ಮ ನಿಂದನೆಯ ಉದ್ದೇಶದಿಂದ ಗಲಭೆ ನಡೆಸಿದ್ದು, ಕಾನೂನುಬಾಹಿರವಾಗಿ ಗುಂಪುಗೂಡಿದ್ದು, ಮಾರಕಾಸ್ತ್ರಗಳನ್ನು ಹಿಡಿದು ಅಲೆದಾಡಿದ್ದು ಮತ್ತು ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ ಆರೋಪಗಳ ಮೇಲೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>'ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ, ರಾತ್ರಿಯೇ 15 ಜನರನ್ನು ಬಂಧಿಸಿದ್ದೇವೆ' ಎಂದು ಡಿಸಿಪಿ (ವಲಯ–4) ಪನ್ನ ಮೊಮಯ ತಿಳಿಸಿದ್ಡಾರೆ.</p>.<p>ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು,ಈವರೆಗೆ ಒಟ್ಟು 19 ಜನರನ್ನು ಬಂಧಿಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p><strong>ಇವನ್ನೂ ಓದಿ<br />*</strong><a href="https://cms.prajavani.net/karnataka-news/hubbali-tense-after-muslim-mob-turned-violent-at-old-hubli-police-station-over-hindutva-whatsapp-929405.html" itemprop="url">ಹುಬ್ಬಳ್ಳಿ ಗಲಭೆ: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಏನಿತ್ತು? </a><br /><strong>*</strong><a href="https://www.prajavani.net/karnataka-news/hubli-communal-violence-89-people-arrested-929360.html" itemprop="url" target="_blank">ಹುಬ್ಬಳ್ಳಿ ಗಲಭೆ: ಪೊಲೀಸ್ ಕಟ್ಟೆಚ್ಚರ- 89 ಮಂದಿ ಬಂಧನ</a><br /><strong>*</strong><a href="https://www.prajavani.net/india-news/more-than-20-held-including-two-juveniles-in-connection-with-jahangirpuri-violence-929406.html" itemprop="url" target="_blank">ಜಹಾಂಗಿರ್ಪುರಿ ಹಿಂಸಾಚಾರ: 20 ಜನರ ಬಂಧನ, ಪೊಲೀಸರಿಂದ ಶಾಂತಿಸಭೆ </a><br />*<a href="https://www.prajavani.net/india-news/clash-breaks-out-between-two-groups-during-religious-procession-in-aps-kurnool-929208.html" itemprop="url" target="_blank">ಉತ್ತರಾಖಂಡ, ಆಂಧ್ರದಲ್ಲೂ ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>