‘ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ಹಾಗೂ ಪಕ್ಷಗಳು ಮತದಾರರನ್ನು ಸೆಳೆಯಲು ಹಣದ ಹೊಳೆ ಹರಿಸುತ್ತಿದ್ದು, ಇದನ್ನು ನಿಯಂತ್ರಿಸಲು ಸಮಗ್ರ ಯೋಜನೆ ರೂಪಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಐಐಟಿ ಪದವೀಧರ ಪ್ರಭಾಕರ್ ದೇಶಪಾಂಡೆ ಎಂಬುವರು ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಸಂಬಂಧ ಆಯೋಗವು ಗುರುವಾರ ನ್ಯಾಯಾಲಯಕ್ಕೆ ಲಿಖಿತ ಉತ್ತರ ಸಲ್ಲಿಸಿದೆ.