<p><strong>ಚಂಡೀಗಡ:</strong> ಪಂಜಾಬ್ ಗುಪ್ತಚರ ದಳದ ಪ್ರಧಾನ ಕಚೇರಿ ಮೇಲೆ ಸೋಮವಾರ ರಾತ್ರಿ ಗ್ರೆನೇಡ್ ದಾಳಿ ನಡೆದಿದೆ. ಸ್ಫೋಟದಲ್ಲಿ ಕಟ್ಟಡಕ್ಕೆ ಭಾಗಶಃ ಹಾನಿಯಾಗಿದೆ. ಯಾರಿಗೂ ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೊಹಾಲಿಯ ಸೆಕ್ಟರ್ 77ರಲ್ಲಿರುವ ಕಚೇರಿಯಲ್ಲಿ ರಾತ್ರಿ 7.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ರಾಜಕೀಯ ಪಕ್ಷಗಳು ಘಟನೆಗೆ ಆಘಾತ ವ್ಯಕ್ತಪಡಿಸಿವೆ.</p>.<p>ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ತನಿಖೆ ನಡೆಸಲಾಗುತ್ತಿದೆ. ವಿಧಿವಿಜ್ಞಾನ ತಂಡಗಳನ್ನು ಕರೆಸಲಾಗಿದೆ. ಎಫ್ಐಆರ್ ದಾಖಲಿಸಲಾಗಿದೆ ಎಂದು ಮೊಹಾಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><a href="https://www.prajavani.net/india-news/fire-breaks-out-in-building-near-bollywood-superstar-shah-rukh-khan-house-935523.html" itemprop="url">ಬಾಲಿವುಡ್ ನಟ ಶಾರುಕ್ ಖಾನ್ ಮನೆಯ ಹತ್ತಿರದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ </a></p>.<p>ಘಟನಾ ಸ್ಥಳವನ್ನು ಪೊಲೀಸರು ಸುತ್ತುವರಿದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ದಾಳಿ ಹಿಂದೆ ಭಯೋತ್ಪಾದಕರ ಕೈವಾಡ ಇದೆಯೇ ಎಂಬ ಪ್ರಶ್ನೆಗೆ ಅವರು, ‘ತನಿಖೆ ನಡೆಯುತ್ತಿದೆ. ಚಂಡೀಗಡ ಪೊಲೀಸ್ ಕ್ಷಿಪ್ರ ಕಾರ್ಯಪಡೆಯನ್ನೂ ನಿಯೋಜಿಸಲಾಗಿದೆ. ಪಂಜಾಬ್ನ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ತಪ್ಪಿತಸ್ಥರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ಉತ್ತರಿಸಿದ್ದಾರೆ.</p>.<p>ಚಂಡೀಗಡದ ಬುರೈಲ್ ಜೈಲಿನಲ್ಲಿ ಏಪ್ರಿಲ್ 24ರಂದು ಸ್ಫೋಟಕ ಪತ್ತೆಯಾಗಿತ್ತು.</p>.<p><a href="https://www.prajavani.net/india-news/not-at-the-instance-of-political-party-and-this-is-too-much-says-sc-935458.html" itemprop="url">ಶಹೀನ್ ಬಾಗ್: ಸಿಪಿಎಂಗೆ ಸುಪ್ರೀಂ ಕೋರ್ಟ್ ತರಾಟೆ </a></p>.<p>ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಘಟನೆಯನ್ನು ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಭಗವಂತ ಮಾನ್ ಅವರನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಪಂಜಾಬ್ ಗುಪ್ತಚರ ದಳದ ಪ್ರಧಾನ ಕಚೇರಿ ಮೇಲೆ ಸೋಮವಾರ ರಾತ್ರಿ ಗ್ರೆನೇಡ್ ದಾಳಿ ನಡೆದಿದೆ. ಸ್ಫೋಟದಲ್ಲಿ ಕಟ್ಟಡಕ್ಕೆ ಭಾಗಶಃ ಹಾನಿಯಾಗಿದೆ. ಯಾರಿಗೂ ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೊಹಾಲಿಯ ಸೆಕ್ಟರ್ 77ರಲ್ಲಿರುವ ಕಚೇರಿಯಲ್ಲಿ ರಾತ್ರಿ 7.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ರಾಜಕೀಯ ಪಕ್ಷಗಳು ಘಟನೆಗೆ ಆಘಾತ ವ್ಯಕ್ತಪಡಿಸಿವೆ.</p>.<p>ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ತನಿಖೆ ನಡೆಸಲಾಗುತ್ತಿದೆ. ವಿಧಿವಿಜ್ಞಾನ ತಂಡಗಳನ್ನು ಕರೆಸಲಾಗಿದೆ. ಎಫ್ಐಆರ್ ದಾಖಲಿಸಲಾಗಿದೆ ಎಂದು ಮೊಹಾಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><a href="https://www.prajavani.net/india-news/fire-breaks-out-in-building-near-bollywood-superstar-shah-rukh-khan-house-935523.html" itemprop="url">ಬಾಲಿವುಡ್ ನಟ ಶಾರುಕ್ ಖಾನ್ ಮನೆಯ ಹತ್ತಿರದ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ </a></p>.<p>ಘಟನಾ ಸ್ಥಳವನ್ನು ಪೊಲೀಸರು ಸುತ್ತುವರಿದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ದಾಳಿ ಹಿಂದೆ ಭಯೋತ್ಪಾದಕರ ಕೈವಾಡ ಇದೆಯೇ ಎಂಬ ಪ್ರಶ್ನೆಗೆ ಅವರು, ‘ತನಿಖೆ ನಡೆಯುತ್ತಿದೆ. ಚಂಡೀಗಡ ಪೊಲೀಸ್ ಕ್ಷಿಪ್ರ ಕಾರ್ಯಪಡೆಯನ್ನೂ ನಿಯೋಜಿಸಲಾಗಿದೆ. ಪಂಜಾಬ್ನ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ತಪ್ಪಿತಸ್ಥರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ಉತ್ತರಿಸಿದ್ದಾರೆ.</p>.<p>ಚಂಡೀಗಡದ ಬುರೈಲ್ ಜೈಲಿನಲ್ಲಿ ಏಪ್ರಿಲ್ 24ರಂದು ಸ್ಫೋಟಕ ಪತ್ತೆಯಾಗಿತ್ತು.</p>.<p><a href="https://www.prajavani.net/india-news/not-at-the-instance-of-political-party-and-this-is-too-much-says-sc-935458.html" itemprop="url">ಶಹೀನ್ ಬಾಗ್: ಸಿಪಿಎಂಗೆ ಸುಪ್ರೀಂ ಕೋರ್ಟ್ ತರಾಟೆ </a></p>.<p>ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಘಟನೆಯನ್ನು ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಭಗವಂತ ಮಾನ್ ಅವರನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>