‘ಭಾರತ್ ಜೋಡೊ ಯಾತ್ರೆಯು ಏಕತೆಯನ್ನು ಸಾರುತ್ತಿದೆ. ಹೀಗಾಗಿ ರಾಹುಲ್ ಗಾಂಧಿ ಅವರ ಜೊತೆಗೆ ಹೆಜ್ಜೆ ಹಾಕಿದ್ದೇನೆ. ಬಿಜೆಪಿ-ಆರ್ಎಸ್ಎಸ್ನಿಂದ ಸಂವಿಧಾನ ರಕ್ಷಿಸುವಂತೆ ಕಾಂಗ್ರೆಸ್ಗೆ ಮನವಿ ಮಾಡಿದ್ದೇನೆ.ರೋಹಿತ್ಗೆ ನ್ಯಾಯ ದೊರಕಿಸಿಕೊಡುವಂತೆ,ರೋಹಿತ್ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವಂತೆ, ದಲಿತರ ಪ್ರಾತಿನಿಧ್ಯ ಹೆಚ್ಚಿಸುವಂತೆ, ಎಲ್ಲರಿಗೂ ಶಿಕ್ಷಣ ನೀಡುವಂತೆ ಮನವಿ ಮಾಡಿದ್ದೇನೆ’ ಎಂದು ರಾಧಿಕಾ ಅವರು ರಾಹುಲ್ ಭೇಟಿಯ ಬಳಿಕ ಟ್ವೀಟ್ ಮಾಡಿದ್ದಾರೆ.