ಈ ಕುರಿತು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಕುಲ್ದೀಪ್ ಸಿಂಗ್ ಠಾಕೂರ್, ‘2010 ಜೂ.28ರಂದು ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಲ್ ಹಾಗೂ ಕೇಂದ್ರ ಸಚಿವ ವೀರ್ಭದ್ರ ಸಿಂಗ್ ಅವರ ಸಮ್ಮುಖದಲ್ಲಿ ಸೋನಿಯಾ ಗಾಂಧಿ ಅವರು ಯೋಜನೆಗೆ ಅಡಿಗಲ್ಲು ಹಾಕಿದ್ದರು. ಈ ಶಿಲಾಫಲಕವನ್ನು 15 ದಿನದೊಳಗಾಗಿ ಸರ್ಕಾರ ಅಲ್ಲಿಯೇ ಅಳವಡಿಸದೇ ಇದ್ದಲ್ಲಿ ರಾಜ್ಯವ್ಯಾಪಿ ಮುಷ್ಕರ ನಡೆಸಲಾಗುವುದು’ ಎಂದು ಎಚ್ಚರಿಸಿದ್ದಾರೆ.