ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರಿಗೆ ವಿಧಿಸಲಾಗುತ್ತಿದ್ದ ದಂಡವನ್ನು ₹ 500ರ ಬದಲು ₹ 2000ಕ್ಕೆ ಹೆಚ್ಚಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಸಭೆ ವೇಳೆ ಈ ಕ್ರಮ ಕೈಗೊಳ್ಳಲಾಗಿದೆ.
ಸಭೆ ಬಳಿಕ ಮಾತನಾಡಿರುವ ಕೇಜ್ರಿವಾಲ್, ‘ಸಾಕಷ್ಟು ಜನರು ಮಾಸ್ಕ್ಗಳನ್ನು ಧರಿಸುತ್ತಿದ್ದಾರೆ. ಆದರೆ ಕೆಲವರು ಇನ್ನೂ ನಿಯಮಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ದಂಡವನ್ನು ₹ 500ರ ಬದಲು ₹ 2000ಕ್ಕೆ ಹೆಚ್ಚಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಮುಂದುವರಿದು, ‘ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ದೆಹಲಿ ಜನರ ಪಾಲಿಗೆ ಸಂಕಷ್ಟದ ಸಮಯವಾಗಿದೆ ಎಂದು ಎಲ್ಲ ಪಕ್ಷದವರಿಗೆ ತಿಳಿಸಿದ್ದೇನೆ. ಇದು ರಾಜಕೀಯ ಮಾಡುವ ಸಮಯವಲ್ಲ. ಅದಕ್ಕಾಗಿ ಜೀವನದುದ್ದಕ್ಕೂ ಸಮಯವಿದೆ. ನಾವು ಕೆಲವು ದಿನಗಳ ಕಾಲ ರಾಜಕೀಯ ಮತ್ತು ಆರೋಪಗಳನ್ನು ಪಕ್ಕಕ್ಕಿಡಬೇಕು. ಇದು ಜನರಿಗೆ ಸೇವೆ ಸಲ್ಲಿಸುವ ಸಮಯ. ಇದನ್ನು ಎಲ್ಲ ಪಕ್ಷಗಳೂ ಒಪ್ಪಿಕೊಂಡಿವೆ’ ಎಂದು ಹೇಳಿದರು.
ಸೋಂಕು ಭೀತಿಯಿಂದಾಗಿ ಕೊಳಗಳು, ನದಿಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬಗಳ ಆಚರಣೆಯನ್ನು ನಿಷೇಧಿಸಲಾಗಿದೆ.ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸುವಂತೆ ಜನರಿಗೆ ಮನವಿ ಮಾಡಲಾಗಿದೆ.
आज सर्वदलीय बैठक में सभी दलों का सहयोग माँगा। ये वक़्त राजनीति का नहीं बल्कि सेवा का है। सभी दलों से निवेदन किया कि वे अपने कार्यकर्ताओं से सभी सार्वजनिक स्थलों पर मास्क बँटवाएं। सभी दलों ने आश्वासन दिया कि वे राजनीति छोड़कर जनसेवा करेंगे। pic.twitter.com/Ft2iqiUWrd
— Arvind Kejriwal (@ArvindKejriwal) November 19, 2020
ಕೋವಿಡ್: ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ನವದೆಹಲಿ (ಪಿಟಿಐ): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿರುವುದಕ್ಕೆ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರವನ್ನು ಗುರುವಾರ ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಲು ಆರಂಭಿಸಿದಾಗ ಸರ್ಕಾರ ಏಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಪ್ರಶ್ನಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.