ಮುಜಫ್ಫರ್ಪುರ:ಬಂದೂಕು ತೋರಿಸಿ ಬೆದರಿಕೆ ಹಾಕಿ ವ್ಯಕ್ತಿಯೊಬ್ಬರಿಂದ ₹ 26 ಲಕ್ಷ ದೋಚಿರುವ ಘಟನೆ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಆರ್ಜೆಡಿ ಶಾಸಕ ಮುಸಾಫಿರ್ ಪಾಸ್ವಾನ್ ಅವರ ಮ್ಯಾನೇಜರ್ ಮುಖೇಶ್ ಅವರು ಮೋತಿಹಾರಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಅವರನ್ನು ತಡೆದ ಆರು ಮಂದಿ, ಹಣ ದೋಚಿ ಪರಾರಿಯಾಗಿದ್ದಾರೆ.ಕಾರ್ಮಿಕರಿಗೆ ಹಣ ಪಾವತಿಸಲು ಮುಖೇಶ್ ಅವರು ಮೋತಿಹಾರಿಗೆ ಹೋಗುತ್ತಿದ್ದರು.
ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.