‘ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇದೇ 5ರಂದು ನಾಗಪುರದಲ್ಲಿ ನಡೆದಿದ್ದ ವಿಜಯದಶಮಿ ಕಾರ್ಯಕ್ರಮದಲ್ಲಿ ಸಂಘದ ಪ್ರಮುಖ ಚಟುವಟಿಕೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ, ಮಾತೃಭಾಷೆಯ ಶಿಕ್ಷಣ ನೀಡುವ, ಮುಸ್ಲಿಂ ಬುದ್ದಿಜೀವಿಗಳು ಹಾಗೂ ಪಾದ್ರಿಗಳೊಂದಿಗೆ ಸಂವಾದ ನಡೆಸುವುದೂ ಸೇರಿದಂತೆ ಅನೇಕ ವಿಚಾರಗಳ ಕುರಿತು ಪ್ರಸ್ತಾಪಿಸಿದ್ದರು. ಇವುಗಳ ಕುರಿತೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ’ ಎಂದು ಆರ್ಎಸ್ಎಸ್ನ ಪ್ರಚಾರ ವಿಭಾಗದ ಮುಖ್ಯಸ್ಥ ಸುನಿಲ್ ಅಂಬೇಡ್ಕರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.