<p><strong>ನವದೆಹಲಿ:</strong> ಕಳೆನಾಶಕ ‘ಗ್ಲೈಫೊಸೇಟ್’ ಬಳಕೆ ಮೇಲೆ ಸಂಪೂರ್ಣ ನಿಷೇಧ ಹೇರಬೇಕು ಎಂದು ಆರ್ಎಸ್ಎಸ್ನ ಅಂಗಸಂಸ್ಥೆಯಾದ ಸ್ವದೇಶಿ ಜಾಗರಣ್ ಮಂಚ್ ಶನಿವಾರ ಆಗ್ರಹಿಸಿದೆ.</p>.<p>ಎರಡು ಲಕ್ಷಕ್ಕೂ ಅಧಿಕ ಜನರು ಸಹಿ ಮಾಡಿರುವ ಮನವಿ ಪತ್ರವನ್ನು ಕೇಂದ್ರ ಕೃಷಿ ಮತ್ತು ಕೃಷಿಕರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಸಲ್ಲಿಸಲಾಗಿದೆ ಎಂದು ಸಂಘಟನೆಯ ಸಹಸಂಚಾಲಕ ಅಶ್ವನಿ ಮಹಾಜನ್ ತಿಳಿಸಿದ್ದಾರೆ.</p>.<p>‘ಗ್ಲೈಫೊಸೇಟ್ ಕ್ಯಾನ್ಸರ್ಗೆ ಕಾರಣವಾಗುತ್ತದೆ. ಈ ಕಳೆನಾಶಕ ಗ್ರಾಹಕರ ಆರೋಗ್ಯ, ಪರಿಸರ, ರೈತರು ಹಾಗೂ ಕೃಷಿ ಕೂಲಿಕಾರ್ಮಿಕರ ಪಾಲಿಗೆ ಕಂಟಕವಾಗಿದೆ’ ಎಂದು ಸಂಘಟನೆ ತಿಳಿಸಿದೆ.</p>.<p>‘ಗ್ಲೈಫೊಸೇಟ್ನ ನಿರ್ಬಂಧಿತ ಬಳಕೆಗೆ ಸರ್ಕಾರ ಅನುಮತಿ ನೀಡಿದೆ. ‘ಪೆಸ್ಟ್ ಕಂಟ್ರೋಲ್ ಆಪರೇಟರ್ಸ್’ ಅನುಮತಿ ಇದ್ದರೆ ಮಾತ್ರ ಈ ಕಳೆನಾಶಕ ಬಳಸಬೇಕು ಎಂದು 2020ರ ಜುಲೈನಲ್ಲಿ ಆದೇಶ ಹೊರಡಿಸಿದೆ. ಆದರೆ, ಇಂಥ ಆದೇಶಕ್ಕೆ ಅರ್ಥವಿಲ್ಲ. ಕಾನೂನುಬಾಹಿರವಾಗಿ ಗ್ಲೈಫೊಸೇಟ್ ಮಾರಾಟವನ್ನು ಇಂಥ ಕ್ರಮಗಳಿಂದ ತಡೆಯಲು ಸಾಧ್ಯ ಇಲ್ಲ’ ಎಂದು ಸಂಘಟನೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಳೆನಾಶಕ ‘ಗ್ಲೈಫೊಸೇಟ್’ ಬಳಕೆ ಮೇಲೆ ಸಂಪೂರ್ಣ ನಿಷೇಧ ಹೇರಬೇಕು ಎಂದು ಆರ್ಎಸ್ಎಸ್ನ ಅಂಗಸಂಸ್ಥೆಯಾದ ಸ್ವದೇಶಿ ಜಾಗರಣ್ ಮಂಚ್ ಶನಿವಾರ ಆಗ್ರಹಿಸಿದೆ.</p>.<p>ಎರಡು ಲಕ್ಷಕ್ಕೂ ಅಧಿಕ ಜನರು ಸಹಿ ಮಾಡಿರುವ ಮನವಿ ಪತ್ರವನ್ನು ಕೇಂದ್ರ ಕೃಷಿ ಮತ್ತು ಕೃಷಿಕರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಸಲ್ಲಿಸಲಾಗಿದೆ ಎಂದು ಸಂಘಟನೆಯ ಸಹಸಂಚಾಲಕ ಅಶ್ವನಿ ಮಹಾಜನ್ ತಿಳಿಸಿದ್ದಾರೆ.</p>.<p>‘ಗ್ಲೈಫೊಸೇಟ್ ಕ್ಯಾನ್ಸರ್ಗೆ ಕಾರಣವಾಗುತ್ತದೆ. ಈ ಕಳೆನಾಶಕ ಗ್ರಾಹಕರ ಆರೋಗ್ಯ, ಪರಿಸರ, ರೈತರು ಹಾಗೂ ಕೃಷಿ ಕೂಲಿಕಾರ್ಮಿಕರ ಪಾಲಿಗೆ ಕಂಟಕವಾಗಿದೆ’ ಎಂದು ಸಂಘಟನೆ ತಿಳಿಸಿದೆ.</p>.<p>‘ಗ್ಲೈಫೊಸೇಟ್ನ ನಿರ್ಬಂಧಿತ ಬಳಕೆಗೆ ಸರ್ಕಾರ ಅನುಮತಿ ನೀಡಿದೆ. ‘ಪೆಸ್ಟ್ ಕಂಟ್ರೋಲ್ ಆಪರೇಟರ್ಸ್’ ಅನುಮತಿ ಇದ್ದರೆ ಮಾತ್ರ ಈ ಕಳೆನಾಶಕ ಬಳಸಬೇಕು ಎಂದು 2020ರ ಜುಲೈನಲ್ಲಿ ಆದೇಶ ಹೊರಡಿಸಿದೆ. ಆದರೆ, ಇಂಥ ಆದೇಶಕ್ಕೆ ಅರ್ಥವಿಲ್ಲ. ಕಾನೂನುಬಾಹಿರವಾಗಿ ಗ್ಲೈಫೊಸೇಟ್ ಮಾರಾಟವನ್ನು ಇಂಥ ಕ್ರಮಗಳಿಂದ ತಡೆಯಲು ಸಾಧ್ಯ ಇಲ್ಲ’ ಎಂದು ಸಂಘಟನೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>