ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಕೆ.ಇಲಂತ್ರಿರೈಯನ್ ಅವರು, 44 ಕಡೆಗಳಲ್ಲಿ ಮಾತ್ರ ಯಾತ್ರೆ ನಡೆಸಲು ಅವಕಾಶ ನೀಡಿದ್ದರು. ಕೊಯಮತ್ತೂರು, ಕನ್ಯಾಕುಮಾರಿ ಸೇರಿದಂತೆ 6 ಕೋಮು ಸೂಕ್ಷ್ಮ ಪ್ರದೇಶದಲ್ಲಿ ಮೆರವಣಿಗೆಗೆ ಅವಕಾಶ ನಿರಾಕರಿಸಿ ಆದೇಶ ಹೊರಡಿಸಿದ್ದರು. ಆದರೆ, ಮೈದಾನ ಅಥವಾ ಸ್ಟೇಡಿಯಂ ಒಳಗೆ ಮಾತ್ರ ಮೆರವಣಿಗೆ ಅಥವಾ ಸಾರ್ವಜನಿಕ ಸಭೆ ನಡೆಸಬೇಕು. ಹಾಗೆಯೇ ಯಾತ್ರೆಯಲ್ಲಿ ಭಾಗಿಯಾಗುವವರು ಬಡಿಗೆ, ಲಾಠಿ ಅಥವಾ ಯಾವುದೇ ಶಸ್ತ್ರಗಳನ್ನು ಹಿಡಿದುಕೊಳ್ಳುವಂತಿಲ್ಲ ಎಂದು ಷರತ್ತು ವಿಧಿಸಿದ್ದರು.