ಗಾಂಧಾರ ಅಪ್ಗಾನಿಸ್ತಾನವಾಯಿತು, ನಂತರ ಪಾಕಿಸ್ತಾನವೂ ಉದಯವಾಯಿತು. ಆದರೆ, ಇಂದು ಆ ರಾಷ್ಟ್ರಗಳಲ್ಲಿ ಶಾಂತಿ ನೆಲೆಸಿದೆಯೇ ಎಂದು ಪ್ರಶ್ನಿಸಿದ ಅವರು, ದೇಶದಿಂದ ವಿಭಜನೆಯಾಗಿ ಹೋದವರು ಸಂತೋಷವನ್ನಷ್ಟೇ ಅಲ್ಲ, ತಮ್ಮತನವನ್ನು ಕಳೆದುಕೊಂಡಿದ್ದಾರೆ. ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಅದು ಇಂದಿಗೂ ಅವರಿಂದ ಸಾಧ್ಯವಾಗಿಲ್ಲ ಎಂದರು.