‘ಆಧುನಿಕ ಕೃಷಿ ವಿಜ್ಞಾನದಲ್ಲಿ ಅಡ್ಡ ಪರಿಣಾಮಗಳಿವೆ. ಆದರೆ ನಮ್ಮ ಪ್ರಾಚೀನ ಕೃಷಿ ಜ್ಞಾನ ಮತ್ತು ಪಶುಸಂಗೋಪನೆ ವಿಧಾನಗಳಲ್ಲಿ ಅಡ್ಡ ಪರಿಣಾಮಗಳಿಲ್ಲ. ಸ್ಥಳೀಯ ಜ್ಞಾನದ ಸಂಶೋಧನೆ ಮತ್ತು ಬಳಕೆಗೆ ಗಮನ ಹರಿಸಬೇಕು. ಯಾಂತ್ರೀಕೃತ ಬೇಸಾಯವು ಹೆಚ್ಚು ಕಾಲ ಉಳಿಯುವುದಿಲ್ಲ. ಇಂದಿಗೂ ಶೇ 65ರಷ್ಟು ರೈತರು ಸಣ್ಣ ಜಮೀನಿನಲ್ಲಿ ಕೃಷಿ ಮಾಡುತ್ತಾರೆ. ಯಾಂತ್ರೀಕೃತ ಕೃಷಿ ಅವರಿಗೆ ಹೆಚ್ಚು ಪ್ರಯೋಜನಕಾರಿಯಾಗಿಲ್ಲ. ರಸಗೊಬ್ಬರ, ಬಿತ್ತನೆ ಬೀಜ ಇತ್ಯಾದಿಯಿಂದ ರೈತ ಸಾಲದ ಸುಳಿಗೆ ಸಿಲುಕಿ, ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ರೈತರು ಅರ್ಥಮಾಡಿಕೊಳ್ಳಬಲ್ಲ ಸುಸ್ಥಿರ ಕೃಷಿ ವಿಧಾನವನ್ನು ಕಲಿಸಬೇಕು’ ಎಂದು ಭಾಗವತ್ ಸಲಹೆ ನೀಡಿದರು.