ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಕಾನೂನು ತರಬೇಕು: ಮೋಹನ್‌ ಭಾಗವತ್‌

Last Updated 15 ಅಕ್ಟೋಬರ್ 2021, 6:04 IST
ಅಕ್ಷರ ಗಾತ್ರ

ಮುಂಬೈ: ಜನಸಂಖ್ಯಾ ಸ್ಫೋಟ ನಿಯಂತ್ರಣಕ್ಕೆ ಸರ್ಕಾರ ಕಾನೂನು ತರಬೇಕು. ಇದನ್ನು ಪ್ರತಿಯೊಬ್ಬರೂ ಸ್ವೀಕರಿಸುತ್ತಾರೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಗಪುರದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವಿಜಯ ದಶಮಿ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್‌ ಭಾಗವತ್‌, ರಾಷ್ಟ್ರದ ಅಭಿವೃದ್ಧಿಗೆ ತೊಡಕಾಗಿರುವುದು ವೇಗವಾಗಿ ವೃದ್ಧಿಸುತ್ತಿರುವ ಜನಸಂಖ್ಯೆ. ಇದರ ಬಗ್ಗೆ ಹಲವರು ಕಳವಳಗೊಂಡಿದ್ದಾರೆ. ಜನಸಂಖ್ಯೆ ವೃದ್ಧಿಯಿಂದ ಸಾಕಷ್ಟು ಸಮಸ್ಯೆಗಳು ಭವಿಷ್ಯದಲ್ಲಿ ಎದುರಾಗಲಿವೆ. ಹಾಗಾಗಿ ಸಮಯೋಚಿತವಾಗಿ ಜನಸಂಖ್ಯೆ ನಿಯಂತ್ರಣದ ಸವಾಲು ತೆಗೆದುಕೊಳ್ಳಬೇಕಿದೆ ಎಂದರು.

ಈ ವಿಚಾರಕ್ಕೆ ಸಂಬಂಧಿಸಿ 2015ರಲ್ಲಿ ರಾಂಚಿಯಲ್ಲಿ ನಡೆದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದಲ್ಲಿ ತೆಗೆದುಕೊಂಡ ದೃಢಸಂಕಲ್ಪವನ್ನು ಪುನರುಚ್ಚರಿಸಿದರು.

ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ವವ್ಯಾಪಿ ಮತ್ತು ಪರಿಣಾಮಕಾರಿ ಕಾನೂನುಗಳನ್ನು ಅನುಷ್ಠಾನಕ್ಕೆ ತರಬೇಕು. ಸರ್ವರಿಗೂ ಅರಿವು ಮೂಡಿಸಬೇಕು. ತಾರತಮ್ಯವಿಲ್ಲದೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಭಾಗವತ್‌ ಹೇಳಿದರು.

ಮೂಲ ಹಿಂದುಗಳಿಗೆ ಕಿರುಕುಳ, ಅಪರಾಧ ಕೃತ್ಯಗಳ ಹೆಚ್ಚಳ ಮತ್ತು ಹುಟ್ಟಿದ ಊರನ್ನೇ ತೊರೆಯುವಂತಹ ಒತ್ತಡಗಳು ನಿರ್ಮಾಣಗೊಳ್ಳಲು ಅಸಮತೋಲನದ ಜನಸಂಖ್ಯಾ ವೃದ್ಧಿ ಕಾರಣ.

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಂದರ್ಭ ಹಿಂಸಾಕೃತ್ಯಗಳು ಸ್ಫೋಟಗೊಳ್ಳಲು ಮತ್ತು ಅಲ್ಲಿನ ಹಿಂದುಗಳಲ್ಲಿ ದಯಾನಿಯ ಪರಿಸ್ಥಿತಿ ನಿರ್ಮಾಣಗೊಳ್ಳಲು ಅಸಮತೋಲನದ ಜನಸಂಖ್ಯಾ ವೃದ್ಧಿ ಮತ್ತು ಅಲ್ಲಿನ ಸರ್ಕಾರದ ನಿರ್ಲಕ್ಷ್ಯ ಧೋರಣೆಗಳು ಕಾರಣ ಎಂದು ಭಾಗವತ್‌ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT