<p><strong>ಮುಂಬೈ:</strong> ಉತ್ಪಾದನೆಯ ವಿಕೇಂದ್ರೀಕರಣದಿಂದ ದೇಶದ ಆರ್ಥಿಕತೆಗೆ ಪ್ರಯೋಜನವಾಗಲಿದೆ. ಉದ್ಯೋಗ ಮತ್ತು ಸ್ವ ಉದ್ಯೋಗಾವಕಾಶ ಸೃಷ್ಟಿಗೆ ನೆರವಾಗಲಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.</p>.<p>ಮುಂಬೈ ಶಾಲೆಯೊಂದರಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನೈಸರ್ಗಿಕ ಸಂಪನ್ಮೂಲಗಳ ಮಿತವಾದ ಬಳಕೆಯನ್ನು ಖಾತರಿಪಡಿಸಲು ‘ನಿಯಂತ್ರಿತ ಗ್ರಾಹಕತ್ವ’ದ ಅಗತ್ಯವಿದೆ ಎಂದಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/prime-minister-narendra-modis-independence-day-speech-at-red-fort-857931.html" itemprop="url">Independence Day| ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಪ್ರಮುಖಾಂಶಗಳು</a></p>.<p>ನಾವು ಎಷ್ಟು ಸಂಪಾದಿಸುತ್ತೇವೆ ಎಂಬುದರ ಆಧಾರದಲ್ಲಿ ಜೀವನ ಗುಣಮಟ್ಟವನ್ನು ನಿರ್ಧರಿಸಬಾರದು. ನಾವು ಎಷ್ಟು ಮರಳಿ ನೀಡುತ್ತೇವೆ ಎಂಬುದರ ಆಧಾರದಲ್ಲಿ ನಿರ್ಧರಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>‘ಎಲ್ಲರ ಹಿತವನ್ನು ಪರಿಗಣಿಸಿದಾಗ ನಮಗೆ ಸಂತೋಷವಾಗುತ್ತದೆ. ಸಂತಸವಾಗಿರಲು ನಾವು ಉತ್ತಮ ಹಣಕಾಸು ಹೊಂದಿರಬೇಕು. ಇದಕ್ಕಾಗಿ ನಾವು ಹಣಕಾಸಿನ ಸಾಮರ್ಥ್ಯ ಹೊಂದಿರಬೇಕಾಗುತ್ತದೆ. ‘ಸ್ವದೇಶಿ’ಯಾಗುವುದು ಎಂದರೆ ನಮ್ಮದೇ ನಿಯಮಗಳು ಮತ್ತು ಷರತ್ತುಗಳ ಆಧಾರದಲ್ಲಿ ವ್ಯವಹಾರ ನಡೆಸುವುದು’ ಎಂದು ಭಾಗವತ್ ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/cm-basavaraj-bommai-speech-in-independence-day-857944.html" itemprop="url">ಸ್ವಾತಂತ್ರ್ಯ ದಿನಾಚರಣೆ: ಸಂಪ್ರದಾಯ ಮುರಿದು ಸಿಎಂ ಬೊಮ್ಮಾಯಿ ಭಾಷಣ</a></p>.<p>ಕೈಗಾರಿಕೆಗಳನ್ನು ಬೆಂಬಲಿಸುವುದು ಮತ್ತು ಪ್ರೋತ್ಸಾಹಿಸುವುದು ಸರ್ಕಾರದ ಕೆಲಸವಾಗಿದೆ. ದೇಶದ ಅಭಿವೃದ್ಧಿಗೆ ಮುಖ್ಯವಾದುದನ್ನು ಉತ್ಪಾದಿಸಲು ಸರ್ಕಾರ ನಿರ್ದೇಶನಗಳನ್ನು ನೀಡಬೇಕು. ಉತ್ಪಾದನೆಯು ಜನ ಕೇಂದ್ರಿತವಾಗಬೇಕು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಉತ್ಪಾದನೆಯ ವಿಕೇಂದ್ರೀಕರಣದಿಂದ ದೇಶದ ಆರ್ಥಿಕತೆಗೆ ಪ್ರಯೋಜನವಾಗಲಿದೆ. ಉದ್ಯೋಗ ಮತ್ತು ಸ್ವ ಉದ್ಯೋಗಾವಕಾಶ ಸೃಷ್ಟಿಗೆ ನೆರವಾಗಲಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.</p>.<p>ಮುಂಬೈ ಶಾಲೆಯೊಂದರಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನೈಸರ್ಗಿಕ ಸಂಪನ್ಮೂಲಗಳ ಮಿತವಾದ ಬಳಕೆಯನ್ನು ಖಾತರಿಪಡಿಸಲು ‘ನಿಯಂತ್ರಿತ ಗ್ರಾಹಕತ್ವ’ದ ಅಗತ್ಯವಿದೆ ಎಂದಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/prime-minister-narendra-modis-independence-day-speech-at-red-fort-857931.html" itemprop="url">Independence Day| ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಪ್ರಮುಖಾಂಶಗಳು</a></p>.<p>ನಾವು ಎಷ್ಟು ಸಂಪಾದಿಸುತ್ತೇವೆ ಎಂಬುದರ ಆಧಾರದಲ್ಲಿ ಜೀವನ ಗುಣಮಟ್ಟವನ್ನು ನಿರ್ಧರಿಸಬಾರದು. ನಾವು ಎಷ್ಟು ಮರಳಿ ನೀಡುತ್ತೇವೆ ಎಂಬುದರ ಆಧಾರದಲ್ಲಿ ನಿರ್ಧರಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>‘ಎಲ್ಲರ ಹಿತವನ್ನು ಪರಿಗಣಿಸಿದಾಗ ನಮಗೆ ಸಂತೋಷವಾಗುತ್ತದೆ. ಸಂತಸವಾಗಿರಲು ನಾವು ಉತ್ತಮ ಹಣಕಾಸು ಹೊಂದಿರಬೇಕು. ಇದಕ್ಕಾಗಿ ನಾವು ಹಣಕಾಸಿನ ಸಾಮರ್ಥ್ಯ ಹೊಂದಿರಬೇಕಾಗುತ್ತದೆ. ‘ಸ್ವದೇಶಿ’ಯಾಗುವುದು ಎಂದರೆ ನಮ್ಮದೇ ನಿಯಮಗಳು ಮತ್ತು ಷರತ್ತುಗಳ ಆಧಾರದಲ್ಲಿ ವ್ಯವಹಾರ ನಡೆಸುವುದು’ ಎಂದು ಭಾಗವತ್ ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/cm-basavaraj-bommai-speech-in-independence-day-857944.html" itemprop="url">ಸ್ವಾತಂತ್ರ್ಯ ದಿನಾಚರಣೆ: ಸಂಪ್ರದಾಯ ಮುರಿದು ಸಿಎಂ ಬೊಮ್ಮಾಯಿ ಭಾಷಣ</a></p>.<p>ಕೈಗಾರಿಕೆಗಳನ್ನು ಬೆಂಬಲಿಸುವುದು ಮತ್ತು ಪ್ರೋತ್ಸಾಹಿಸುವುದು ಸರ್ಕಾರದ ಕೆಲಸವಾಗಿದೆ. ದೇಶದ ಅಭಿವೃದ್ಧಿಗೆ ಮುಖ್ಯವಾದುದನ್ನು ಉತ್ಪಾದಿಸಲು ಸರ್ಕಾರ ನಿರ್ದೇಶನಗಳನ್ನು ನೀಡಬೇಕು. ಉತ್ಪಾದನೆಯು ಜನ ಕೇಂದ್ರಿತವಾಗಬೇಕು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>