ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವರ್ಕರ್‌ ಟೀಕಾಕಾರರ ಮುಂದಿನ ಗುರಿ ಸ್ವಾಮಿ ವಿವೇಕಾನಂದ: ಮೋಹನ್‌ ಭಾಗವತ್‌

Last Updated 13 ಅಕ್ಟೋಬರ್ 2021, 1:43 IST
ಅಕ್ಷರ ಗಾತ್ರ

ನವದೆಹಲಿ: ವಿನಾಯಕ ದಾಮೋದರ ಸಾವರ್ಕರ್‌ ಅವರನ್ನು ಟೀಕಿಸುವವರ ವಿರುದ್ಧ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಹರಿಹಾಯ್ದಿದ್ದಾರೆ. ಸ್ವಾತಂತ್ರ್ಯದ ನಂತರ ಸಂಘಟಿತ ಪ್ರಚಾರದ ಮೂಲಕ ಸ್ವಾತಂತ್ರ್ಯ ಹೋರಾಟಗಾರನನ್ನು ಅಪಖ್ಯಾತಿಗೆ ಗುರಿಯಾಗಿಸಲಾಗಿದೆ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ಮಾಹಿತಿ ಕಮಿಷನರ್‌ ಉದಯ್‌ ಮಹುರ್ಕರ್‌ ಮತ್ತು ಚಿರಾಯು ಪಂಡಿತ್‌ ಅವರ 'ವೀರ್‌ ಸಾವರ್ಕರ್‌: ದಿ ಮ್ಯಾನ್‌ ಹೂ ಕುಡ್‌ ಹ್ಯಾವ್‌ ಪ್ರಿವೆಂಟೆಡ್‌ ಪಾರ್ಟಿಷನ್‌' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮೋಹನ್‌ ಭಾಗವತ್‌ ಮಾತನಾಡಿದರು.

ಸಾವರ್ಕರ್‌ ಅವರನ್ನು ಟೀಕಿಸುತ್ತಿರುವವರ ಮುಂದಿನ ಗುರಿ ಸ್ವಾಮಿ ವಿವೇಕಾನಂದ, ದಯಾನಂದ ಸರಸ್ವತಿ ಮತ್ತು ಸ್ವಾಮಿ ಅರಬಿಂದೊ ಆಗಿರಬಹುದು ಎಂದು ಮೋಹನ್‌ ಭಾಗವತ್‌ ಹೇಳಿದರು.

ನಮ್ಮ ಆಚರಣೆಯ ವಿಧಾನ ಬೇರೆಯಾಗಿದೆ, ಆದರೆ ನಮ್ಮ ಪೂರ್ವಜರು ಒಂದೇ. ಅವರು ತುಂಬಾ ರಾಷ್ಟ್ರಪ್ರೇಮಿಗಳು. ದೇಶ ವಿಭಜನೆ ಸಂದರ್ಭ ಪಾಕಿಸ್ತಾನಕ್ಕೆ ಹೋದವರಿಗೆ ಅಲ್ಲಿ ಮರ್ಯಾದೆ ಸಿಗುತ್ತಿಲ್ಲ. ಅಂದು ನಮಗೆ ದೊಡ್ಡ ಹಿನ್ನಡೆಯಾಗಿದ್ದು ಹಿಂದು-ಮುಸ್ಲಿಂ ಏಕತೆಯನ್ನು ಕಾಪಾಡುವಲ್ಲಿ ವಿಫಲರಾಗಿದ್ದು ಮತ್ತು ಖಿಲಾಫತ್‌ ಚಳುವಳಿಗೆ ಸೇರ್ಪಡೆಯಾಗಿದ್ದು ಎಂದು ಭಾಗವತ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT