<p><strong>ಅಯೋಧ್ಯೆ:</strong> ‘ಎಲ್ಲರೂ ರಾಮರೇ, ಎಲ್ಲರಲ್ಲೂ ರಾಮನೇ ಇದ್ದಾನೆ. ರಾಮ ಮಂದಿರನವನ್ನು ಇಲ್ಲಿಯೇ ಕಟ್ಟೋಣ. ನಮ್ಮ ಹೃದಯಗಳನ್ನು ಅಯೋಧ್ಯೆ ಮಾಡಿಕೊಳ್ಳೋಣ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.</p>.<p>ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಮಾತನಾಡಿದ ಅವರು, ‘ಧರ್ಮ ಎಲ್ಲರನ್ನೂ ಮೇಲ್ಮೆಗೆ ತರುತ್ತದೆ. ವಿಶ್ವಕ್ಕೇ ಭಾರತವು ಸುಖ ಶಾಂತಿ ತರಬಲ್ಲದು. ನಾವು ಅಯೋಧ್ಯೆಯಲ್ಲಿ ಮಂದಿರ ಕಟ್ಟಿ ಸುಮ್ಮನಾಗಬಾರದು. ಅದಕ್ಕೂ ಮೊದಲು ಮನಮಮಂದಿರ ಕಟ್ಟಬೇಕು’ ಎಂದು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/pm-back-in-ayodhya-after-29-years-for-ram-temple-ceremony-750920.html" itemprop="url">ಅಯೋಧ್ಯೆ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ</a></p>.<p>ಅತಿಆಸೆ, ವಿಪರೀತ ಸಿಟ್ಟು, ಜಿಪುಣತನದಂಥ ಸಮಾಜಕಂಟಕ ಸ್ವಭಾಗಳನ್ನು ದೂರವಿಡಲು ರಾಮನ ಆದರ್ಶಗಳಿಂದ ಸ್ಪೂರ್ತಿ ಪಡೆಯೋಣ ಎಂದು ಕರೆ ನೀಡಿದರು.</p>.<p>‘ಇದು ನನಗೆ ಅತ್ಯಂತ ಆನಂದದ ದಿನ. ಈ ಹಿಂದೆ ನಮ್ಮ ಸರಸಂಘಚಾಲಕರಾಗಿದ್ದ ಬಾಳಾಸಾಹೇಬ್ ದೇವರಸರು ‘ಈ ಕೆಲಸವನ್ನು ವರ್ಷಗಟ್ಟಲೆ ಮಾಡಬೇಕು’ ಎಂದು ಹೇಳಿದ್ದರು. ಅದೇ ರೀತಿ ನಾವು ನಡೆದುಕೊಂಡೆವು. ಸಾವಿರಾರು ಮಂದಿ ಈ ಕಾರ್ಯಕ್ಕಾಗಿ ಬಲಿದಾನ ಮಾಡಿದ್ದರು. ಅವರೆಲ್ಲರನ್ನೂ ನಾನು ನೆನಪಿಸಿಕೊಳ್ಳುತ್ತೇನೆ ಎಂದು ಭಾಗವತ್ ಹೇಳಿದರು.</p>.<p><strong>ಲೈವ್ ಅಪ್ಡೇಟ್ಸ್:</strong><a href="https://www.prajavani.net/india-news/ayodhya-ram-mandir-bhoomi-pujan-live-latest-news-updates-hindu-temple-ram-janmabhoomi-750884.html" itemprop="url">ಅಯೋಧ್ಯೆ | ರಾಮ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ</a></p>.<p>ಅಡ್ವಾಣಿ ಅವರು ಈ ಕಾರ್ಯಕ್ರಮವನ್ನು ತಮ್ಮ ನಿವಾಸದಲ್ಲಿ ನೋಡುತ್ತಿರಬಹುದು. ಸಾಕಷ್ಟು ನಾಯಕರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ. ಕೊರೊನಾ ಕಾಲದಿಂದ ವಿಶ್ವ ಅಂತರ್ಮುಖಿಯಾಗಿದೆ. ಏನಾದರೂ ದಾರಿಯಿದೆಯೇ ಎಂದು ಎದುರು ನೋಡುತ್ತಿದೆ. ನಮಗೆ ವಿಶ್ವಾಸವಿದೆ. ರಾಮನ ಹಾದಿಯಲ್ಲಿ ಪರಿಹಾರವಿದೆ ಎಂದು ಅವರು ಹೇಳಿದರು.</p>.<p>ದೇಶದಲ್ಲಿ ಈಗಾಗಲೇ ಲಕ್ಷಾಂತರ ಮಂದಿರಗಳಿವೆ. ಆದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಎನ್ನುವುದು ಅವೆಲ್ಲಕ್ಕಿಂತಲೂ ಭಿನ್ನ. ಇಲ್ಲಿ ಮಂದಿರ ನಿರ್ಮಾಣವಾಗುವ ಮೊದಲು ನಮ್ಮ ಮನಮಂದಿರಗಳನ್ನು ನಿರ್ಮಿಸಿಕೊಳ್ಳೋಣ ಎಂದು ಭಾಗವತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ:</strong> ‘ಎಲ್ಲರೂ ರಾಮರೇ, ಎಲ್ಲರಲ್ಲೂ ರಾಮನೇ ಇದ್ದಾನೆ. ರಾಮ ಮಂದಿರನವನ್ನು ಇಲ್ಲಿಯೇ ಕಟ್ಟೋಣ. ನಮ್ಮ ಹೃದಯಗಳನ್ನು ಅಯೋಧ್ಯೆ ಮಾಡಿಕೊಳ್ಳೋಣ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.</p>.<p>ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಮಾತನಾಡಿದ ಅವರು, ‘ಧರ್ಮ ಎಲ್ಲರನ್ನೂ ಮೇಲ್ಮೆಗೆ ತರುತ್ತದೆ. ವಿಶ್ವಕ್ಕೇ ಭಾರತವು ಸುಖ ಶಾಂತಿ ತರಬಲ್ಲದು. ನಾವು ಅಯೋಧ್ಯೆಯಲ್ಲಿ ಮಂದಿರ ಕಟ್ಟಿ ಸುಮ್ಮನಾಗಬಾರದು. ಅದಕ್ಕೂ ಮೊದಲು ಮನಮಮಂದಿರ ಕಟ್ಟಬೇಕು’ ಎಂದು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/pm-back-in-ayodhya-after-29-years-for-ram-temple-ceremony-750920.html" itemprop="url">ಅಯೋಧ್ಯೆ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ</a></p>.<p>ಅತಿಆಸೆ, ವಿಪರೀತ ಸಿಟ್ಟು, ಜಿಪುಣತನದಂಥ ಸಮಾಜಕಂಟಕ ಸ್ವಭಾಗಳನ್ನು ದೂರವಿಡಲು ರಾಮನ ಆದರ್ಶಗಳಿಂದ ಸ್ಪೂರ್ತಿ ಪಡೆಯೋಣ ಎಂದು ಕರೆ ನೀಡಿದರು.</p>.<p>‘ಇದು ನನಗೆ ಅತ್ಯಂತ ಆನಂದದ ದಿನ. ಈ ಹಿಂದೆ ನಮ್ಮ ಸರಸಂಘಚಾಲಕರಾಗಿದ್ದ ಬಾಳಾಸಾಹೇಬ್ ದೇವರಸರು ‘ಈ ಕೆಲಸವನ್ನು ವರ್ಷಗಟ್ಟಲೆ ಮಾಡಬೇಕು’ ಎಂದು ಹೇಳಿದ್ದರು. ಅದೇ ರೀತಿ ನಾವು ನಡೆದುಕೊಂಡೆವು. ಸಾವಿರಾರು ಮಂದಿ ಈ ಕಾರ್ಯಕ್ಕಾಗಿ ಬಲಿದಾನ ಮಾಡಿದ್ದರು. ಅವರೆಲ್ಲರನ್ನೂ ನಾನು ನೆನಪಿಸಿಕೊಳ್ಳುತ್ತೇನೆ ಎಂದು ಭಾಗವತ್ ಹೇಳಿದರು.</p>.<p><strong>ಲೈವ್ ಅಪ್ಡೇಟ್ಸ್:</strong><a href="https://www.prajavani.net/india-news/ayodhya-ram-mandir-bhoomi-pujan-live-latest-news-updates-hindu-temple-ram-janmabhoomi-750884.html" itemprop="url">ಅಯೋಧ್ಯೆ | ರಾಮ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ</a></p>.<p>ಅಡ್ವಾಣಿ ಅವರು ಈ ಕಾರ್ಯಕ್ರಮವನ್ನು ತಮ್ಮ ನಿವಾಸದಲ್ಲಿ ನೋಡುತ್ತಿರಬಹುದು. ಸಾಕಷ್ಟು ನಾಯಕರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ. ಕೊರೊನಾ ಕಾಲದಿಂದ ವಿಶ್ವ ಅಂತರ್ಮುಖಿಯಾಗಿದೆ. ಏನಾದರೂ ದಾರಿಯಿದೆಯೇ ಎಂದು ಎದುರು ನೋಡುತ್ತಿದೆ. ನಮಗೆ ವಿಶ್ವಾಸವಿದೆ. ರಾಮನ ಹಾದಿಯಲ್ಲಿ ಪರಿಹಾರವಿದೆ ಎಂದು ಅವರು ಹೇಳಿದರು.</p>.<p>ದೇಶದಲ್ಲಿ ಈಗಾಗಲೇ ಲಕ್ಷಾಂತರ ಮಂದಿರಗಳಿವೆ. ಆದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಎನ್ನುವುದು ಅವೆಲ್ಲಕ್ಕಿಂತಲೂ ಭಿನ್ನ. ಇಲ್ಲಿ ಮಂದಿರ ನಿರ್ಮಾಣವಾಗುವ ಮೊದಲು ನಮ್ಮ ಮನಮಂದಿರಗಳನ್ನು ನಿರ್ಮಿಸಿಕೊಳ್ಳೋಣ ಎಂದು ಭಾಗವತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>