ಎರಡು ದಿನಗಳ ಪ್ರವಾಸಕ್ಕಾಗಿ ಅವರು ಭಾನುವಾರ ಮೇಘಾಲಯಕ್ಕೆ ಆಗಮಿಸಿದ್ದಾರೆ. ಪ್ರವಾದ ಮೊದಲ ದಿನ ಶಿಲ್ಲಾಂಗ್ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ಸಮಾಜವನ್ನು ಸಂಘಟಿಸುವುದು ಆರ್ಎಸ್ಎಸ್ ಧ್ಯೇಯವಾಗಿದೆ. ಇದರಿಂದ ದೇಶವು ಸರ್ವತೋಮುಖ ಬೆಳವಣಿಗೆಯನ್ನು ಕಾಣುತ್ತದೆ.ವೈಯಕ್ತಿಕ ಸ್ವಾರ್ಥವನ್ನು ಬದಿಗಿರಿಸಿ ದೇಶಕ್ಕಾಗಿ ತ್ಯಾಗ ಮಾಡಬೇಕು ಎಂಬುದನ್ನು ಆರ್ಎಸ್ಎಸ್ ಕಲಿಸಿಕೊಡುತ್ತದೆ’ ಎಂದರು.