ಅಂತ್ಯಸಂಸ್ಕಾರಕ್ಕೆ ಮೊದಲು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಾಧವ್ ಅವರ ಮನೆಗೂ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಎಂ.ಜಿ.ವೈದ್ಯ ಅವರು ಸಂಘದ ಸಿದ್ಧಾಂತಕ್ಕೆ ಅನುಗುಣವಾಗಿ ಬದುಕಿದವರು. ಅವರು ಆರ್ಎಸ್ಎಸ್ನ ವಿಶ್ವಕೋಶ. ನಾವು ಒಬ್ಬ ಪೋಷಕನನ್ನು ಕಳೆದುಕೊಂಡಿದ್ದೇವೆ’ ಎಂದರು.