<p><strong>ಅಹಮದಾಬಾದ್</strong>: ‘ದೇಶದ ಬಗ್ಗೆ ಜಾಗತಿಕವಾಗಿ ತಪ್ಪು ಮಾಹಿತಿಯನ್ನೆ ಪ್ರಚುರಪಡಿಸಲಾಗುತ್ತಿದೆ. ಈ ತಪ್ಪುಕಲ್ಪನೆಗಳನ್ನು ಹೋಗಲಾಡಿಸಿ, ಭಾರತದ ಬಗ್ಗೆ ವಾಸ್ತವ ಸಂಗತಿಗಳಿಂದ ಕೂಡಿದ ವಿವರಣೆ ನೀಡಲು ಸಂಘ ನಿರ್ಧರಿಸಿದೆ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ತೇಯ ಹೊಸಬಾಳೆ ಭಾನುವಾರ ಹೇಳಿದ್ದಾರೆ.</p>.<p>ಇಲ್ಲಿ ನಡೆಯುತ್ತಿರುವ ಆರ್ಎಸ್ಎಸ್ನ ಮೂರು ದಿನಗಳ ವಾರ್ಷಿಕ ಸಮಾವೇಶ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ದ ಹಿನ್ನೆಲೆಯಲ್ಲಿರುವ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>'ಈ ಉದ್ದೇಶಕ್ಕಾಗಿ ಸಂಶೋಧಕರು, ಲೇಖಕರ ನೆರವು ಪಡೆಯಲಾಗುವುದು. ಭಾರತೀಯ ಸಮಾಜ, ಹಿಂದೂ ಸಮುದಾಯದ ಇತಿಹಾಸ, ಸಂಸ್ಕೃತಿ ಹಾಗೂ ಜೀವನಶೈಲಿ ಕುರಿತು ಜಗತ್ತಿಗೆ ಹಾಗೂ ದೇಶೀಯವಾಗಿ ನೈಜಚಿತ್ರಣ ನೀಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಈ ಮೂರು ದಿನಗಳ ಸಮಾವೇಶದಲ್ಲಿ ಚರ್ಚಿಸಲಾಗುವುದು’ ಎಂದೂ ಅವರು ಹೇಳಿದರು.</p>.<p>‘2025ರಲ್ಲಿ ಆರ್ಎಸ್ಎಸ್ಗೆ ಶತಮಾನೋತ್ಸವ ಸಂಭ್ರಮ. ಈ ಹಿನ್ನೆಲೆಯಲ್ಲಿ ಸಂಘದ ನೆಲೆಯನ್ನು ವಿಸ್ತರಿಸಲು ಕಾರ್ಯಕ್ರಮ ರೂಪಿಸಲಾಗುವುದು. ಸಂಖ್ಯಾ ದೃಷ್ಟಿಯಿಂದ ಮಾತ್ರವಲ್ಲ, ರಾಷ್ಟ್ರೀಯತೆ ಹಾಗೂ ಏಕತೆಯಂತಹ ವಿಚಾರಗಳ ತಳಹದಿಯಲ್ಲಿ ಸಂಘದ ಚಟುವಟಿಕೆಗಳನ್ನು ವಿಸ್ತರಿಸಲು ಯೋಜಿಸಲಾಗಿದೆ’ ಎಂದೂ ಹೇಳಿದರು.</p>.<p>ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಮಿತಿಯಾಗಿರುವ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ ಕಾರ್ಯಕ್ರಮದಲ್ಲಿ 1,252 ಪದಾಧಿಕಾರಿಗಳು ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ‘ದೇಶದ ಬಗ್ಗೆ ಜಾಗತಿಕವಾಗಿ ತಪ್ಪು ಮಾಹಿತಿಯನ್ನೆ ಪ್ರಚುರಪಡಿಸಲಾಗುತ್ತಿದೆ. ಈ ತಪ್ಪುಕಲ್ಪನೆಗಳನ್ನು ಹೋಗಲಾಡಿಸಿ, ಭಾರತದ ಬಗ್ಗೆ ವಾಸ್ತವ ಸಂಗತಿಗಳಿಂದ ಕೂಡಿದ ವಿವರಣೆ ನೀಡಲು ಸಂಘ ನಿರ್ಧರಿಸಿದೆ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ತೇಯ ಹೊಸಬಾಳೆ ಭಾನುವಾರ ಹೇಳಿದ್ದಾರೆ.</p>.<p>ಇಲ್ಲಿ ನಡೆಯುತ್ತಿರುವ ಆರ್ಎಸ್ಎಸ್ನ ಮೂರು ದಿನಗಳ ವಾರ್ಷಿಕ ಸಮಾವೇಶ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ದ ಹಿನ್ನೆಲೆಯಲ್ಲಿರುವ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>'ಈ ಉದ್ದೇಶಕ್ಕಾಗಿ ಸಂಶೋಧಕರು, ಲೇಖಕರ ನೆರವು ಪಡೆಯಲಾಗುವುದು. ಭಾರತೀಯ ಸಮಾಜ, ಹಿಂದೂ ಸಮುದಾಯದ ಇತಿಹಾಸ, ಸಂಸ್ಕೃತಿ ಹಾಗೂ ಜೀವನಶೈಲಿ ಕುರಿತು ಜಗತ್ತಿಗೆ ಹಾಗೂ ದೇಶೀಯವಾಗಿ ನೈಜಚಿತ್ರಣ ನೀಡಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಈ ಮೂರು ದಿನಗಳ ಸಮಾವೇಶದಲ್ಲಿ ಚರ್ಚಿಸಲಾಗುವುದು’ ಎಂದೂ ಅವರು ಹೇಳಿದರು.</p>.<p>‘2025ರಲ್ಲಿ ಆರ್ಎಸ್ಎಸ್ಗೆ ಶತಮಾನೋತ್ಸವ ಸಂಭ್ರಮ. ಈ ಹಿನ್ನೆಲೆಯಲ್ಲಿ ಸಂಘದ ನೆಲೆಯನ್ನು ವಿಸ್ತರಿಸಲು ಕಾರ್ಯಕ್ರಮ ರೂಪಿಸಲಾಗುವುದು. ಸಂಖ್ಯಾ ದೃಷ್ಟಿಯಿಂದ ಮಾತ್ರವಲ್ಲ, ರಾಷ್ಟ್ರೀಯತೆ ಹಾಗೂ ಏಕತೆಯಂತಹ ವಿಚಾರಗಳ ತಳಹದಿಯಲ್ಲಿ ಸಂಘದ ಚಟುವಟಿಕೆಗಳನ್ನು ವಿಸ್ತರಿಸಲು ಯೋಜಿಸಲಾಗಿದೆ’ ಎಂದೂ ಹೇಳಿದರು.</p>.<p>ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಮಿತಿಯಾಗಿರುವ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ ಕಾರ್ಯಕ್ರಮದಲ್ಲಿ 1,252 ಪದಾಧಿಕಾರಿಗಳು ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>