ಭಾರತ ಪ್ರತಿಷ್ಠಾನ ಆಯೋಜಿಸಿದ್ದ ‘ಮೇಕರ್ಸ್ ಆಫ್ ಮಾಡರ್ನ್ ದಲಿತ್ ಹಿಸ್ಟರಿ’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾರತದ ಇತಿಹಾಸವು ದಲಿತರ ಇತಿಹಾಸಕ್ಕಿಂತ ಭಿನ್ನವಾಗಿಲ್ಲ. ದಲಿತರ ಇತಿಹಾಸವಿಲ್ಲದೆ ಭಾರತದ ಇತಿಹಾಸವು ಅಪೂರ್ಣ. ಅವರು ಸಾಮಾಜಿಕ ಬದಲಾವಣೆಯಲ್ಲಿ ಮುಂಚೂಣಿಯಲ್ಲಿದ್ದಾರೆ’ ಎಂದು ಒತ್ತಿ ಹೇಳಿದರು.