<p><strong>ನಾಗ್ಪುರ:</strong> ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಣಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್) ಸ್ವಯಂ ಸೇವಕರು ಮಹಾರಾಷ್ಟ್ರದ ವಿದರ್ಭ ಪ್ರದೇಶದ 27 ಲಕ್ಷ ಕುಟುಂಬಗಳಿಂದ ₹57 ಕೋಟಿ ನಿಧಿ ಸಂಗ್ರಹಿಸಿದ್ದಾರೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಎಸ್ಎಸ್ನ ವಿದರ್ಭ ಪ್ರಾಂತ ಕಾರ್ಯವಾಹ ದೀಪಕ್ ತಮ್ಶೆಟ್ಟಿವಾರ್, ‘ಇತ್ತೀಚೆಗೆ ಪೂರ್ಣಗೊಂಡ ವಿಶೇಷ ನಿಧಿ ಸಂಗ್ರಹ ಅಭಿಯಾನದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 7,512 ಮಹಿಳೆಯರು ಸೇರಿದಂತೆ 70,796 ಆರ್ಎಸ್ಎಸ್ ಸ್ವಯಂಸೇವಕರು ವಿದರ್ಭದ 12,310 ಗ್ರಾಮಗಳ 27,67,991 ಕುಟುಂಬಗಳನ್ನು ಭೇಟಿಯಾಗಿ, ₹57 ಕೋಟಿ ನಿಧಿ ಸಂಗ್ರಹಿಸಿದ್ದಾರೆ‘ ಎಂದರು.</p>.<p>ದೇಶದಲ್ಲಿ ಸುಮಾರು 80 ಸಾವಿರ ಮಹಿಳೆಯರು ಸೇರಿದಂತೆ 20.64 ಲಕ್ಷ ಸ್ವಯಂ ಸೇವಕರು ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದಲ್ಲಿ 5.45 ಲಕ್ಷಕ್ಕೂ ಹೆಚ್ಚು ಹಳ್ಳಿಗಳಲ್ಲಿನ 12.42 ಕೋಟಿಗೂ ಹೆಚ್ಚು ಕುಟುಂಬಗಳನ್ನು ಭೇಟಿಯಾಗಿದ್ದಾರೆ ಎಂದು ಅವರು ವಿವರಿಸಿದರು. ಆದರೆ, ಈ ಅಭಿಯಾನದ ಅಡಿ ದೇಶದಾದ್ಯಂತ ಎಷ್ಟು ಮೊತ್ತ ಸಂಗ್ರಹವಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ದೀಪಕ್ ಹೇಳಿದರು.</p>.<p>‘ಇತ್ತೀಚೆಗೆ ಆರ್ಎಸ್ಎಸ್ನ ಸರಕಾರ್ಯವಾಹರಾಗಿ ಆಯ್ಕೆಯಾಗಿರುವ ದತ್ತಾತ್ರೇಯ ಹೊಸಬಾಳೆ ಅವರು ಶೀಘ್ರದಲ್ಲೇ ನಾಗ್ಪುರದಲ್ಲಿರುವ ಸಂಘದ ಪ್ರಧಾನ ಕಚೇರಿಯಿಂದ ಕೆಲಸ ಮಾಡಲು ಪ್ರಾರಂಭಿಸುತ್ತಾರೆ‘ ಎಂದು ತಮ್ಶೆಟ್ಟಿವಾರ್ ಹೇಳಿದರು.</p>.<p>ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ನಡೆದ ಆರ್ಎಸ್ಎಸ್ನ ಅಖಿಲ ಭಾರತೀಯ ಪ್ರತಿನಿಧಿಗಳ (ಎಪಿಬಿಎಸ್) ವಾರ್ಷಿಕ ಸಭೆಯಲ್ಲಿ ದತ್ತಾತ್ರೇಯ ಹೊಸಬಾಳೆ ಅವರನ್ನು ಆರ್ಎಸ್ಎಸ್ನ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ)ರನ್ನಾಗಿ ಆಯ್ಕೆ ಮಾಡಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/12-year-old-kerala-boy-dies-while-trying-to-straighten-hair-using-kerosene-oil-and-lit-matchstick-816316.html" target="_blank">ಕೇರಳ: ತಲೆಗೂದಲಿಗೆ ಸೀಮೆಎಣ್ಣೆ ಹಾಕಿ ನೇರಗೊಳಿಸಲು ಯತ್ನ, ಬೆಂಕಿ ತಗುಲಿ ಬಾಲಕ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಣಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್) ಸ್ವಯಂ ಸೇವಕರು ಮಹಾರಾಷ್ಟ್ರದ ವಿದರ್ಭ ಪ್ರದೇಶದ 27 ಲಕ್ಷ ಕುಟುಂಬಗಳಿಂದ ₹57 ಕೋಟಿ ನಿಧಿ ಸಂಗ್ರಹಿಸಿದ್ದಾರೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಎಸ್ಎಸ್ನ ವಿದರ್ಭ ಪ್ರಾಂತ ಕಾರ್ಯವಾಹ ದೀಪಕ್ ತಮ್ಶೆಟ್ಟಿವಾರ್, ‘ಇತ್ತೀಚೆಗೆ ಪೂರ್ಣಗೊಂಡ ವಿಶೇಷ ನಿಧಿ ಸಂಗ್ರಹ ಅಭಿಯಾನದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 7,512 ಮಹಿಳೆಯರು ಸೇರಿದಂತೆ 70,796 ಆರ್ಎಸ್ಎಸ್ ಸ್ವಯಂಸೇವಕರು ವಿದರ್ಭದ 12,310 ಗ್ರಾಮಗಳ 27,67,991 ಕುಟುಂಬಗಳನ್ನು ಭೇಟಿಯಾಗಿ, ₹57 ಕೋಟಿ ನಿಧಿ ಸಂಗ್ರಹಿಸಿದ್ದಾರೆ‘ ಎಂದರು.</p>.<p>ದೇಶದಲ್ಲಿ ಸುಮಾರು 80 ಸಾವಿರ ಮಹಿಳೆಯರು ಸೇರಿದಂತೆ 20.64 ಲಕ್ಷ ಸ್ವಯಂ ಸೇವಕರು ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದಲ್ಲಿ 5.45 ಲಕ್ಷಕ್ಕೂ ಹೆಚ್ಚು ಹಳ್ಳಿಗಳಲ್ಲಿನ 12.42 ಕೋಟಿಗೂ ಹೆಚ್ಚು ಕುಟುಂಬಗಳನ್ನು ಭೇಟಿಯಾಗಿದ್ದಾರೆ ಎಂದು ಅವರು ವಿವರಿಸಿದರು. ಆದರೆ, ಈ ಅಭಿಯಾನದ ಅಡಿ ದೇಶದಾದ್ಯಂತ ಎಷ್ಟು ಮೊತ್ತ ಸಂಗ್ರಹವಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ದೀಪಕ್ ಹೇಳಿದರು.</p>.<p>‘ಇತ್ತೀಚೆಗೆ ಆರ್ಎಸ್ಎಸ್ನ ಸರಕಾರ್ಯವಾಹರಾಗಿ ಆಯ್ಕೆಯಾಗಿರುವ ದತ್ತಾತ್ರೇಯ ಹೊಸಬಾಳೆ ಅವರು ಶೀಘ್ರದಲ್ಲೇ ನಾಗ್ಪುರದಲ್ಲಿರುವ ಸಂಘದ ಪ್ರಧಾನ ಕಚೇರಿಯಿಂದ ಕೆಲಸ ಮಾಡಲು ಪ್ರಾರಂಭಿಸುತ್ತಾರೆ‘ ಎಂದು ತಮ್ಶೆಟ್ಟಿವಾರ್ ಹೇಳಿದರು.</p>.<p>ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ನಡೆದ ಆರ್ಎಸ್ಎಸ್ನ ಅಖಿಲ ಭಾರತೀಯ ಪ್ರತಿನಿಧಿಗಳ (ಎಪಿಬಿಎಸ್) ವಾರ್ಷಿಕ ಸಭೆಯಲ್ಲಿ ದತ್ತಾತ್ರೇಯ ಹೊಸಬಾಳೆ ಅವರನ್ನು ಆರ್ಎಸ್ಎಸ್ನ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ)ರನ್ನಾಗಿ ಆಯ್ಕೆ ಮಾಡಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/12-year-old-kerala-boy-dies-while-trying-to-straighten-hair-using-kerosene-oil-and-lit-matchstick-816316.html" target="_blank">ಕೇರಳ: ತಲೆಗೂದಲಿಗೆ ಸೀಮೆಎಣ್ಣೆ ಹಾಕಿ ನೇರಗೊಳಿಸಲು ಯತ್ನ, ಬೆಂಕಿ ತಗುಲಿ ಬಾಲಕ ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>