ಈ ಪ್ರಕರಣದ ಬಗ್ಗೆ ಮಾರ್ಚ್ 12ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಘಟನೆಯು ವಿಧಾನಸಭೆಯ ಅಧಿವೇಶನದಲ್ಲಿ ನಡೆದಿತ್ತು. ಹೀಗಾಗಿ, ಸ್ಪೀಕರ್ ಅವರ ಪೂರ್ವಾನುಮತಿ ಇಲ್ಲದೆಯೇ ಪ್ರಕರಣವನ್ನು ದಾಖಲಿಸಲು ಅವಕಾಶ ಇಲ್ಲ ಎಂದು ಕೇರಳ ಸರ್ಕಾರ ಪ್ರತಿಪಾದಿಸಿತ್ತು.