ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರ ಬಂದ್‌

Last Updated 11 ಅಕ್ಟೋಬರ್ 2021, 18:42 IST
ಅಕ್ಷರ ಗಾತ್ರ

ಮುಂಬೈ: ಲಖಿಂಪುರ–ಖೇರಿ ಹಿಂಸಾಚಾರ ಖಂಡಿಸಿ ಆಡಳಿತಾರೂಢ ಮಹಾವಿಕಾಸ ಅಘಾಡಿಯು ಸೋಮವಾರ ಮಹಾರಾಷ್ಟ್ರ ಬಂದ್‌ಗೆ ಕರೆ ಕೊಟ್ಟಿತ್ತು. ಪರಿಣಾಮವಾಗಿ, ಮುಂಬೈ ಮತ್ತು ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಮುಂಬೈನ ಬಹುತೇಕ ಅಂಗಡಿಗಳು ಮುಚ್ಚಿದ್ದವು. ಕೆಲವೆಡೆ ಕಲ್ಲೆಸೆತದ ಘಟನೆಗಳ ಬಳಿಕ ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದ್ದವು. ಬಂದ್‌ ಶೇ ನೂರರಷ್ಟು ಯಶಸ್ವಿಯಾಗಿದೆ ಎಂದು ಶಿವಸೇನಾ ಸಂಸದ ಸಂಜಯ ರಾವುತ್‌ ಹೇಳಿದ್ದಾರೆ.

ಇದು ರಾಜ್ಯ ಸರ್ಕಾರ ಪ್ರಾಯೋಜಕತ್ವದ ಬಂದ್‌. ಈ ಬಂದ್‌ ಅನಗತ್ಯವಾಗಿತ್ತು ಎಂದು ಬಿಜೆಪಿ ಮುಖಂಡರು ಟೀಕಿಸಿದ್ದಾರೆ. ಶಿವಸೇನಾ ಮತ್ತು ಎನ್‌ಸಿಪಿ ಜತೆಯಾಗಿ ಠಾಣೆಯಲ್ಲಿ ಭಾರಿ ರ‍್ಯಾಲಿಯನ್ನು ಆಯೋಜಿಸಿತ್ತು. ಬಂದ್‌ ನಡುವೆಯೂ ಆಟೋರಿಕ್ಷಾ ಚಾಲನೆ ಮಾಡಿದ ಕೆಲವು ಚಾಲಕರನ್ನು ಈ ಪಕ್ಷಗಳ ಕಾರ್ಯಕರ್ತರು ಥಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT