ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪರೇಷನ್ ಗಂಗಾ: ಯುದ್ಧ ಪೀಡಿತ ಉಕ್ರೇನ್‌ನಿಂದ ಮತ್ತೆ 250 ಮಂದಿ ಭಾರತಕ್ಕೆ

Last Updated 27 ಫೆಬ್ರುವರಿ 2022, 1:28 IST
ಅಕ್ಷರ ಗಾತ್ರ

ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ ರೊಮೇನಿಯಾಕ್ಕೆ ಸ್ಥಳಾಂತರಗೊಂಡಿದ್ದ 250 ಮಂದಿಯನ್ನು ಭಾರತಕ್ಕೆ ಕರೆತರಲಾಯಿತು.

‘ಆಪರೇಷನ್ ಗಂಗಾ’ದ ಎರಡನೇ ಹಂತದಲ್ಲಿ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ 250 ಮಂದಿ ಭಾನುವಾರ ಮುಂಜಾನೆ ನವದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

250 ಮಂದಿ ಭಾರತೀಯರನ್ನೊಳಗೊಂಡ ವಿಮಾನಬುಕಾರೆಸ್ಟ್‌ನಿಂದ ಟೇಕಾಫ್ ಆಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಶನಿವಾರ ತಡರಾತ್ರಿ ಟ್ವೀಟ್ ಮಾಡಿದ್ದರು.

ಮೊದಲ ಹಂತದ ತೆರವು ಕಾರ್ಯಾಚರಣೆಯಲ್ಲಿ 219 ಮಂದಿಯನ್ನು ಶನಿವಾರ ತಾಯ್ನಾಡಿಗೆ ಕರೆತರಲಾಗಿತ್ತು. ಬುಕಾರೆಸ್ಟ್‌ನಿಂದ 219 ಭಾರತೀಯರನ್ನು ಹೊತ್ತ ಏರ್‌ ಇಂಡಿಯಾ ವಿಮಾನವು ಶನಿವಾರ ಸಂಜೆ ಮುಂಬೈಗೆ ಬಂದಿಳಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT