<p><strong>ನವದೆಹಲಿ:</strong> ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ಗುರುವಾರ ಭೇಟಿ ಮಾಡಿರುವ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಚರ್ಚೆ ನಡೆಸಿದ್ದಾರೆ.</p>.<p>ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಿಂದ ಗೆಹಲೋತ್ ಹಿಂದಕ್ಕೆ ಸರಿದಿರುವ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳು ಕಂಡುಬಂದಿವೆ.</p>.<p>ರಾಜಸ್ಥಾನ ಕಾಂಗ್ರೆಸ್ನಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ನೈತಿಕ ಹೊಣೆ ಹೊತ್ತುಕೊಂಡಿದ್ದ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಲ್ಲದೆ ರಾಜಸ್ಥಾನ ಸಿಎಂ ಆಗಿ ಮುಂದುವರಿಯಬೇಕೇ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/congress-says-decision-on-rajasthan-cm-in-a-day-or-two-976239.html" itemprop="url">ರಾಜಸ್ಥಾನ ಸಿಎಂ ಸ್ಥಾನದ ವಿಚಾರದಲ್ಲಿ ಒಂದೆರಡು ದಿನಗಳಲ್ಲಿ ನಿರ್ಧಾರ: ವೇಣುಗೋಪಾಲ್ </a></p>.<p>ಕಳೆದ ಭಾನುವಾರ ಕಾಂಗ್ರೆಸ್ ವೀಕ್ಷಕರನ್ನಾಗಿ ಕಳುಹಿಸಿದ್ದ ಅಜಯ್ ಮಾಕನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಕರೆದಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಗೆ ಹಾಜರಾಗದೆ ಗೆಹಲೋತ್ ಬಣದ ನಿಷ್ಠಾವಂತ ಶಾಸಕರು ಪ್ರತ್ಯೇಕ ಸಭೆ ನಡೆಸಿರುವುದು ಪಕ್ಷದಲ್ಲಿ ಮತ್ತಷ್ಟು ಆಂತರಿಕ ಭಿನ್ನಮತ ಉಲ್ಪಣಗೊಳ್ಳಲು ಕಾರಣವಾಗಿತ್ತು.</p>.<p>ಬಳಿಕ ಸೋನಿಯಾ ಗಾಂಧಿ ಅವರಿಗೆ ಪಕ್ಷದ ವೀಕ್ಷಕರಾದ ಮಾಕನ್ ಹಾಗೂ ಖರ್ಗೆ ಲಿಖಿತ ವರದಿ ನೀಡಿ ಶಿಸ್ತಿನ ಕ್ರಮಕ್ಕೆ ಶಿಫಾರಸು ಮಾಡಿದ್ದರು.</p>.<p>ಅಲ್ಲದೆ ಗೆಹಲೋತ್ ಬಣದ ನಿಷ್ಠಾವಂತ ಸಚಿವರಾದ ಶಾಂತಿ ಧರಿವಾಲ್, ಮಹೇಶ್ ಜೋಶಿ ಮತ್ತು ಧರ್ಮೇಂದ್ರ ರಾಥೋಡ್ ಅವರಲ್ಲಿ ಶಿಸ್ತಿನ ಕ್ರಮ ಏಕೆ ಕೈಗೊಳ್ಳಬಾರದು ಎಂಬುದಕ್ಕೆ ಸಂಬಂಧಿಸಿದಂತೆ 10 ದಿನಗಳೊಳಗೆ ವಿವರಣೆ ನೀಡುವಂತೆ ಕೇಳಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/congress-warns-of-disciplinary-action-against-party-leaders-in-rajasthan-976258.html" itemprop="url">ಪಕ್ಷದ ಆಂತರಿಕ ವಿಚಾರ ಕುರಿತು ಹೇಳಿಕೆ ನೀಡುವ ನಾಯಕರ ವಿರುದ್ಧ ಕ್ರಮ: ಕಾಂಗ್ರೆಸ್ </a></p>.<p>ಜೈಪುರದಲ್ಲಿ ಧರಿವಾಲ್ ನಿವಾಸದಲ್ಲಿ ನಡೆದ ಪ್ರತ್ಯೇಕ ಸಭೆಯಲ್ಲಿ 82 ಶಾಸಕರು ಭಾಗಿಯಾಗಿದ್ದರು. ನೂತನ ಸಿಎಂ ಆಯ್ಕೆ ವಿಚಾರದಲ್ಲಿ ಹಲವು ಷರತ್ತುಗಳನ್ನು ವಿಧಿಸಿದ್ದರಲ್ಲದೆ ಸಾಮೂಹಿಕ ರಾಜೀನಾಮೆಯ ಬೆದರಿಕೆಯನ್ನು ಒಡ್ಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ಗುರುವಾರ ಭೇಟಿ ಮಾಡಿರುವ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಚರ್ಚೆ ನಡೆಸಿದ್ದಾರೆ.</p>.<p>ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಿಂದ ಗೆಹಲೋತ್ ಹಿಂದಕ್ಕೆ ಸರಿದಿರುವ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳು ಕಂಡುಬಂದಿವೆ.</p>.<p>ರಾಜಸ್ಥಾನ ಕಾಂಗ್ರೆಸ್ನಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ನೈತಿಕ ಹೊಣೆ ಹೊತ್ತುಕೊಂಡಿದ್ದ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಲ್ಲದೆ ರಾಜಸ್ಥಾನ ಸಿಎಂ ಆಗಿ ಮುಂದುವರಿಯಬೇಕೇ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/congress-says-decision-on-rajasthan-cm-in-a-day-or-two-976239.html" itemprop="url">ರಾಜಸ್ಥಾನ ಸಿಎಂ ಸ್ಥಾನದ ವಿಚಾರದಲ್ಲಿ ಒಂದೆರಡು ದಿನಗಳಲ್ಲಿ ನಿರ್ಧಾರ: ವೇಣುಗೋಪಾಲ್ </a></p>.<p>ಕಳೆದ ಭಾನುವಾರ ಕಾಂಗ್ರೆಸ್ ವೀಕ್ಷಕರನ್ನಾಗಿ ಕಳುಹಿಸಿದ್ದ ಅಜಯ್ ಮಾಕನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಕರೆದಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಗೆ ಹಾಜರಾಗದೆ ಗೆಹಲೋತ್ ಬಣದ ನಿಷ್ಠಾವಂತ ಶಾಸಕರು ಪ್ರತ್ಯೇಕ ಸಭೆ ನಡೆಸಿರುವುದು ಪಕ್ಷದಲ್ಲಿ ಮತ್ತಷ್ಟು ಆಂತರಿಕ ಭಿನ್ನಮತ ಉಲ್ಪಣಗೊಳ್ಳಲು ಕಾರಣವಾಗಿತ್ತು.</p>.<p>ಬಳಿಕ ಸೋನಿಯಾ ಗಾಂಧಿ ಅವರಿಗೆ ಪಕ್ಷದ ವೀಕ್ಷಕರಾದ ಮಾಕನ್ ಹಾಗೂ ಖರ್ಗೆ ಲಿಖಿತ ವರದಿ ನೀಡಿ ಶಿಸ್ತಿನ ಕ್ರಮಕ್ಕೆ ಶಿಫಾರಸು ಮಾಡಿದ್ದರು.</p>.<p>ಅಲ್ಲದೆ ಗೆಹಲೋತ್ ಬಣದ ನಿಷ್ಠಾವಂತ ಸಚಿವರಾದ ಶಾಂತಿ ಧರಿವಾಲ್, ಮಹೇಶ್ ಜೋಶಿ ಮತ್ತು ಧರ್ಮೇಂದ್ರ ರಾಥೋಡ್ ಅವರಲ್ಲಿ ಶಿಸ್ತಿನ ಕ್ರಮ ಏಕೆ ಕೈಗೊಳ್ಳಬಾರದು ಎಂಬುದಕ್ಕೆ ಸಂಬಂಧಿಸಿದಂತೆ 10 ದಿನಗಳೊಳಗೆ ವಿವರಣೆ ನೀಡುವಂತೆ ಕೇಳಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/congress-warns-of-disciplinary-action-against-party-leaders-in-rajasthan-976258.html" itemprop="url">ಪಕ್ಷದ ಆಂತರಿಕ ವಿಚಾರ ಕುರಿತು ಹೇಳಿಕೆ ನೀಡುವ ನಾಯಕರ ವಿರುದ್ಧ ಕ್ರಮ: ಕಾಂಗ್ರೆಸ್ </a></p>.<p>ಜೈಪುರದಲ್ಲಿ ಧರಿವಾಲ್ ನಿವಾಸದಲ್ಲಿ ನಡೆದ ಪ್ರತ್ಯೇಕ ಸಭೆಯಲ್ಲಿ 82 ಶಾಸಕರು ಭಾಗಿಯಾಗಿದ್ದರು. ನೂತನ ಸಿಎಂ ಆಯ್ಕೆ ವಿಚಾರದಲ್ಲಿ ಹಲವು ಷರತ್ತುಗಳನ್ನು ವಿಧಿಸಿದ್ದರಲ್ಲದೆ ಸಾಮೂಹಿಕ ರಾಜೀನಾಮೆಯ ಬೆದರಿಕೆಯನ್ನು ಒಡ್ಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>