2016ರಲ್ಲಿ ಅಮಾನ್ಯೀಕರಣಗೊಂಡಿದ್ದ ₹ 1,400 ಕೋಟಿ ಮೌಲ್ಯದ ನೋಟುಗಳನ್ನು ಬದಲಾಯಿಸಿಕೊಡುವಂತೆ ತಮ್ಮ ಸಹೋದ್ಯೋಗಿಗಳಿಗೆ ಒತ್ತಡ ಹೇರಿದ್ದರು ಎಂದು ಆಮ್ ಆದ್ಮಿ ಪಕ್ಷದ ಶಾಸಕ ದುರ್ಗೇಶ್ ಪಾಠಕ್ ಅವರು ಸೋಮವಾರ ದೆಹಲಿ ವಿಧಾನಸಭೆಯಲ್ಲಿ ಆರೋಪಿಸಿದ್ದರು. ಇದನ್ನೂ ಪ್ರಸ್ತಾಪಿಸಿದ ಸಂಜಯ್ ಸಿಂಗ್, ಅಂತಹ ಗಂಭೀರ ಆರೋಪ ಬಂದಾಗಲೂ ಕ್ರಮ ಕೈಗೊಂಡಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ.