ಪುದುಚೇರಿ: ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಿ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದೆ.
ನಾರಾಯಣಸ್ವಾಮಿ ಮತ್ತು ಕಿರಣ್ ಬೇಡಿ ನಡುವಿನ ಜಟಾಪಟಿ ಹೊಸದಲ್ಲ, ರಾಜ್ಯದ ಅಭಿವೃದ್ಧಿಕಾರ್ಯಗಳಿಗೆ ಕಿರಣ್ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಿ ನಾರಾಯಣಸ್ವಾಮಿ ಈ ಹಿಂದೆ ಮೂರು ಸಲ ಧರಣಿ ನಡೆಸಿದ್ದರು. ಇದೀಗ ಮತ್ತೆ 4 ದಿನಗಳ ಪ್ರತಿಭಟನೆ ನಡೆಸುತ್ತಿದ್ದಾರೆ.
ನಾರಾಯಣಸ್ವಾಮಿ ನೇತೃತ್ವದದಲ್ಲಿ ಸರ್ಕಾರದ ಸಚಿವರು, ಶಾಸಕರು ಜ.8ರಿಂದ ರಾಜ್ ನಿವಾಸ್ ಎದುರು ನಾಲ್ಕು ದಿನಗಳ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ದರಣಿಗೆ ಸಿಪಿಐ, ಸಿಪಿಐ (ಎಂ), ವಿಸಿಕೆ ಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಕಿರಣ್ ಬೇಡಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ದರಣಿ ನಿರತರು ಕೂಡಲೇ ಕಿರಣ್ ಬೇಡಿಯನ್ನು ಕೇಂದ್ರ ಸರ್ಕಾರ ವಾಪಾಸು ಕರೆಸಿಕೊಳ್ಳಬೇಕು ಅಥವಾ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.