ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಮಸೂದೆ: ಇಂದು ರಾಷ್ಟ್ರಪತಿಗಳ ಭೇಟಿಯಾಗಲಿದೆ ಶಿರೋಮಣಿ ಅಕಾಲಿ ದಳ ನಿಯೋಗ

Last Updated 23 ಸೆಪ್ಟೆಂಬರ್ 2020, 7:31 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್‌ನಲ್ಲಿ ಕೃಷಿ ಮಸೂದೆಗಳ ಅಂಗೀಕಾರಕ್ಕೆ ಸಂಬಂಧಿಸಿ ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಸಂಸದ ಸುಖ್‌ಬೀರ್ ಸಿಂಗ್ ಬಾದಲ್ ನೇತೃತ್ವದ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂದು ಸಂಜೆ 4.30ಕ್ಕೆ ಭೇಟಿಯಾಗಲಿದೆ.

ಕೃಷಿ ಮಸೂದೆಗಳಿಗೆ ಅಕಾಲಿ ದಳ ಹಿಂದಿನಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಪಂಜಾಬ್‌ನಲ್ಲಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದಿವೆ.

ರೈತರ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಮಸೂದೆಗಳಿಗೆ ಭಾರಿ ಗದ್ದಲ, ಪ್ರತಿಭಟನೆ ಮತ್ತು ವಿರೋಧದ ನಡುವೆಯೇ ಭಾನುವಾರ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT