ಲವ್ ಜಿಹಾದ್ ವಿರುದ್ಧ ಅತ್ಯಂತ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಪ್ರಾಚಿ, ‘ಲವ್ ಜಿಹಾದ್ನಲ್ಲಿ ತೊಡಗಿಸಿಕೊಂಡವರನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಬೇಕು’ ಎಂದಿದ್ದಾರೆ. ಸಾದ್ವಿ ಪ್ರಾಚಿ ಅವರ ಹೇಳಿಕೆಗೆ ಸಂತರು ವಿರೋಧ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಕೋಮು ವಾತಾವರಣವನ್ನು ಕೆಡಿಸುವ ಯಾವುದೇ ಹೇಳಿಕೆಯನ್ನು ನೀಡಬಾರದು ಎಂದು ಹೇಳಿದ್ದಾರೆ. ‘ಕಾನೂನು ಉಲ್ಲಂಘಿಸಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಇಂಥ ಹೇಳಿಕೆಗಳನ್ನು ನೀಡುವುದನ್ನು ಅವರು ಬಿಡಬೇಕು’ ಎಂದು ಅಯೋಧ್ಯೆಯ ರಾಮಮಂದಿರದ ಮುಖ್ಯ ಅರ್ಚಕರಾದ ಸತ್ಯೇಂದ್ರ ದಾಸ್ ಹೇಳಿದರು.