ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ ಪ್ರತಿಭಟನೆ: ಸಲ್ಮಾನ್ ಖುರ್ಷಿದ್ ಮತ್ತಿತರರ ವಿರುದ್ಧ ಆರೋಪ ಪಟ್ಟಿ

ಪ್ರಚೋದನಕಾರಿ ಭಾಷಣದ ಆರೋಪ: ದೆಹಲಿ ಪೊಲೀಸರು
Last Updated 24 ಸೆಪ್ಟೆಂಬರ್ 2020, 10:52 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಫೆಬ್ರುವರಿ ತಿಂಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿರಿಯ ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಉದಿತ್‌ ರಾಜ್ ಸೇರಿದಂತೆ ವಿವಿಧ ರಾಜಕೀಯ ನಾಯಕರು ಪ್ರಚೋದನಕಾರಿ ಭಾಷಣ ಮಾಡಿರುವುದಾಗಿ ದೆಹಲಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಪೊಲೀಸರು ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಅವರ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.

‘ದೀರ್ಘಕಾಲ ಪ್ರತಿಭಟನೆಯನ್ನು ಮುಂದುವರಿಸಲು ಸಲ್ಮಾನ್ ಖುರ್ಷಿದ್, ರಾಹುಲ್ ರಾಯ್ (ಸಿನಿಮಾ ನಿರ್ಮಾಪಕ), ಭೀಮ್ ಆರ್ಮಿ ಸದಸ್ಯರಾದ ಹಿಮಾಂಶು, ಚಂದನ್‌ಕುಮಾರ್ ಅವರಂಥ ಕೆಲವು ವ್ಯಕ್ತಿಗಳು ನನಗೆ ಮತ್ತು ಖಾಲಿದ್ ಸೈಫಿಗೆ ಸೂಚಿಸಿದ್ದರು. ಅವರು ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣಗಳು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರು’ ಎಂದು ಇಶ್ರತ್‌ ಜಹಾನ್ ಹೇಳಿಕೆ ನೀಡಿದ್ದಾರೆ. ಇವರ ಎಲ್ಲ ಹೇಳಿಕೆಗಳನ್ನೂ ಪೊಲೀಸರು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT