<p class="title"><strong>ಲಖನೌ:</strong> ನಗರದಲ್ಲಿ ಮಂಗಳವಾರ ಐದು ಅಂತಸ್ತಿನ ವಸತಿ ಸಮುಚ್ಚಯ ಕುಸಿದು ಇಬ್ಬರು ಮಹಿಳೆಯರು ಮೃತಪಟ್ಟು 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ (ಎಸ್ಪಿ) ಶಾಸಕರೊಬ್ಬರ ಮಗನನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="bodytext">ಕಿತೋರೆ ಕ್ಷೇತ್ರದ ಶಾಹಿದ್ ಮನ್ಝೂರ್ ಅವರ ಮಗ ನವಾಜಿಶ್ ಶಾಹಿದ್ ಬಂಧಿತ. ಆತನನ್ನು ಮೀರಠ್ನಲ್ಲಿ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<p class="bodytext">ಪ್ರಕರಣಕ್ಕೆ ಸಂಬಂಧಿಸಿ ಹಜ್ರತ್ಗಂಜ್ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ. ಮೊಹಮ್ಮದ್ ತಾರಿಕ್ ಮತ್ತು ಫಹಾದ್ ಯಾಝ್ದಾನಿ ಎಂಬ ಇನ್ನೂ ಇಬ್ಬರ ಹೆಸರು ಎಫ್ಐಆರ್ನಲ್ಲಿ ನಮೂದಾಗಿದೆ. ಕಟ್ಟಡ ನಿರ್ಮಿಸಲಾಗಿದ್ದ ಭೂಮಿಯು ಶಾಹಿದ್ ಮಾಲಿಕತ್ವದಲ್ಲಿದೆ. ‘ಯಾಝ್ದಾನಿ ಬಿಲ್ಡರ್ಸ್’ ಈ ಕಟ್ಟಡವನ್ನು ನಿರ್ಮಿಸಿದ್ದರು. </p>.<p class="bodytext">ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಇಚ್ಛೆಯಿಂದ ನೋವುಂಟು ಮಾಡುವುದು), 308 (ಕೊಲೆ ಯತ್ನ), 420 (ವಂಚನೆ) ಮತ್ತು 120ಬಿ (ಕ್ರಿಮಿನಲ್ ಸಂಚು) ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯ ಸೆಕ್ಷನ್ 7ರ ಅಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p class="bodytext">ಎಸ್ಪಿ ವಕ್ತಾರ ಅಬ್ಬಾಸ್ ಹೈದರ್ ಅವರ ತಾಯಿ ಮತ್ತು ಮಡದಿ ಮೃತಪಟ್ಟವರು. ಇನ್ನೂ ಇಬ್ಬರು ಅವಶೇಷಗಳ ಅಡಿ ಸಿಲುಕಿರುವ ಶಂಕೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ:</strong> ನಗರದಲ್ಲಿ ಮಂಗಳವಾರ ಐದು ಅಂತಸ್ತಿನ ವಸತಿ ಸಮುಚ್ಚಯ ಕುಸಿದು ಇಬ್ಬರು ಮಹಿಳೆಯರು ಮೃತಪಟ್ಟು 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ (ಎಸ್ಪಿ) ಶಾಸಕರೊಬ್ಬರ ಮಗನನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="bodytext">ಕಿತೋರೆ ಕ್ಷೇತ್ರದ ಶಾಹಿದ್ ಮನ್ಝೂರ್ ಅವರ ಮಗ ನವಾಜಿಶ್ ಶಾಹಿದ್ ಬಂಧಿತ. ಆತನನ್ನು ಮೀರಠ್ನಲ್ಲಿ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<p class="bodytext">ಪ್ರಕರಣಕ್ಕೆ ಸಂಬಂಧಿಸಿ ಹಜ್ರತ್ಗಂಜ್ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ. ಮೊಹಮ್ಮದ್ ತಾರಿಕ್ ಮತ್ತು ಫಹಾದ್ ಯಾಝ್ದಾನಿ ಎಂಬ ಇನ್ನೂ ಇಬ್ಬರ ಹೆಸರು ಎಫ್ಐಆರ್ನಲ್ಲಿ ನಮೂದಾಗಿದೆ. ಕಟ್ಟಡ ನಿರ್ಮಿಸಲಾಗಿದ್ದ ಭೂಮಿಯು ಶಾಹಿದ್ ಮಾಲಿಕತ್ವದಲ್ಲಿದೆ. ‘ಯಾಝ್ದಾನಿ ಬಿಲ್ಡರ್ಸ್’ ಈ ಕಟ್ಟಡವನ್ನು ನಿರ್ಮಿಸಿದ್ದರು. </p>.<p class="bodytext">ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಇಚ್ಛೆಯಿಂದ ನೋವುಂಟು ಮಾಡುವುದು), 308 (ಕೊಲೆ ಯತ್ನ), 420 (ವಂಚನೆ) ಮತ್ತು 120ಬಿ (ಕ್ರಿಮಿನಲ್ ಸಂಚು) ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯ ಸೆಕ್ಷನ್ 7ರ ಅಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p class="bodytext">ಎಸ್ಪಿ ವಕ್ತಾರ ಅಬ್ಬಾಸ್ ಹೈದರ್ ಅವರ ತಾಯಿ ಮತ್ತು ಮಡದಿ ಮೃತಪಟ್ಟವರು. ಇನ್ನೂ ಇಬ್ಬರು ಅವಶೇಷಗಳ ಅಡಿ ಸಿಲುಕಿರುವ ಶಂಕೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>