<p><strong>ಲಖನೌ</strong>: ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯ ಜೈಲಿನಿಂದ ಶುಕ್ರವಾರ ಬಿಡುಗಡೆ ಆಗಿದ್ದಾರೆ.</p>.<p>87 ಪ್ರಕರಣಗಳಲ್ಲಿ ಅಜಂ ಖಾನ್ ಬಿಡುಗಡೆಗೆ ಆದೆಶ ಮಾಡಲಾಗಿರುವುದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಸಂವಿಧಾನದ 142ನೇ ವಿಧಿಯ ವಿಶೇಷ ಅಧಿಕಾರವನ್ನು ಬಳಸಿಕೊಂಡು ಅಜಂಖಾನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.</p>.<p>ಅಜಂ ಖಾನ್ ಅವರ ಪುತ್ರ ಮತ್ತು ಶಾಸಕ ಅಬ್ದುಲ್ಲಾ ಅಜಂ, ಪ್ರಗತಿಶೀಲ ಸಮಾಜವಾದಿ ಪಕ್ಷದ (ಲೋಹಿಯಾ) ನಾಯಕ ಶಿವಪಾಲ್ ಸಿಂಗ್ ಯಾದವ್ ಮತ್ತು ಬೆಂಬಲಿಗರು ಸಮಾಜವಾದಿ ಪಕ್ಷದ ಹಿರಿಯ ನಾಯಕನನ್ನು ಬರಮಾಡಿಕೊಂಡರು.</p>.<p>ಬಿಡುಗಡೆಯ ನಂತರ ಅವರು ತಮ್ಮ ಹುಟ್ಟೂರಾದ ರಾಂಪುರಕ್ಕೆ ತೆರಳಿದರು.</p>.<p>ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬಿಡುಗಡೆ ಆದೇಶ ಜೈಲಿ ತಲುಪಿದ್ದು, ಎಲ್ಲಾ ಪ್ರಕ್ರಿಯೆಗಳ ನಂತರ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಅಜಂ ಖಾನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಸೀತಾಪುರ ಜೈಲಿನ ಜೈಲರ್ ಆರ್ ಎಸ್ ಯಾದವ್ ತಿಳಿಸಿದ್ದಾರೆ.</p>.<p>ಭೂಕಬಳಿಕೆ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ 27 ತಿಂಗಳಿಂದ ಅಜಂ ಖಾನ್ ಜೈಲಿನಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯ ಜೈಲಿನಿಂದ ಶುಕ್ರವಾರ ಬಿಡುಗಡೆ ಆಗಿದ್ದಾರೆ.</p>.<p>87 ಪ್ರಕರಣಗಳಲ್ಲಿ ಅಜಂ ಖಾನ್ ಬಿಡುಗಡೆಗೆ ಆದೆಶ ಮಾಡಲಾಗಿರುವುದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಸಂವಿಧಾನದ 142ನೇ ವಿಧಿಯ ವಿಶೇಷ ಅಧಿಕಾರವನ್ನು ಬಳಸಿಕೊಂಡು ಅಜಂಖಾನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.</p>.<p>ಅಜಂ ಖಾನ್ ಅವರ ಪುತ್ರ ಮತ್ತು ಶಾಸಕ ಅಬ್ದುಲ್ಲಾ ಅಜಂ, ಪ್ರಗತಿಶೀಲ ಸಮಾಜವಾದಿ ಪಕ್ಷದ (ಲೋಹಿಯಾ) ನಾಯಕ ಶಿವಪಾಲ್ ಸಿಂಗ್ ಯಾದವ್ ಮತ್ತು ಬೆಂಬಲಿಗರು ಸಮಾಜವಾದಿ ಪಕ್ಷದ ಹಿರಿಯ ನಾಯಕನನ್ನು ಬರಮಾಡಿಕೊಂಡರು.</p>.<p>ಬಿಡುಗಡೆಯ ನಂತರ ಅವರು ತಮ್ಮ ಹುಟ್ಟೂರಾದ ರಾಂಪುರಕ್ಕೆ ತೆರಳಿದರು.</p>.<p>ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬಿಡುಗಡೆ ಆದೇಶ ಜೈಲಿ ತಲುಪಿದ್ದು, ಎಲ್ಲಾ ಪ್ರಕ್ರಿಯೆಗಳ ನಂತರ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಅಜಂ ಖಾನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಸೀತಾಪುರ ಜೈಲಿನ ಜೈಲರ್ ಆರ್ ಎಸ್ ಯಾದವ್ ತಿಳಿಸಿದ್ದಾರೆ.</p>.<p>ಭೂಕಬಳಿಕೆ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ 27 ತಿಂಗಳಿಂದ ಅಜಂ ಖಾನ್ ಜೈಲಿನಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>