ಸಂಭಾಲ್(ಉತ್ತರಪ್ರದೇಶ): ಸಮಾಜವಾದಿ ಪಕ್ಷ (ಎಸ್ಪಿ)ದ ಸಂಸದ ಶಫಿಕುರ್ ರೆಹಮಾನ್ ಬಾರ್ಕ್ ಅವರು ತಮ್ಮದೇ ಪಕ್ಷದ ವಿರುದ್ಧ ಆರೋಪ ಮಾಡಿದ್ದು,ಎಸ್ಪಿ ಮುಸ್ಲಿಮರ ಪರವಾಗಿಕೆಲಸ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿಬಿಜೆಪಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಯೋಗಿ ಸರ್ಕಾರ ಮುಸ್ಲಿಮರಿಗೆ ನ್ಯಾಯ ಒದಗಿಸುತ್ತಿಲ್ಲ ಎಂದು ಹೇಳಿದ್ದಾರೆ.
ಉತ್ತರಪ್ರದೇಶದ ವಿಧಾನ ಪರಿಷತ್ ಚುನಾವಣೆಯಲ್ಲಿ ಶನಿವಾರ ಮತ ಚಲಾಯಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ನಿಯಮ, ಸಿದ್ಧಾಂತಗಳಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಮುಸ್ಲಿಮರಿಗೆ ನ್ಯಾಯ ಒದಗಿಸುತ್ತಿಲ್ಲ. ಇತ್ತ ಸಮಾಜವಾದಿ ಪಕ್ಷ ಕೂಡ ಮುಸ್ಲಿಮರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಬಾರ್ಕ್ ಅವರು ತಮ್ಮದೇ ಪಕ್ಷದ ವಿರುದ್ಧ ಆರೋಪ ಮಾಡುವ ಮೂಲಕ ಪಕ್ಷವನ್ನುಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಈ ಹಿಂದೆ ಕೂಡ ಅವರು ಹಲವು ವಿವಾದ್ಮಕ ವಿಷಯಗಳ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು.